ಹುಬ್ಬಳ್ಳಿ:ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಇದ್ದಾಗಲೇ ರೈತರ ಸಂಕಷ್ಟಕ್ಕೆ ಬಿಜೆಪಿ ಸರ್ಕಾರ ಸ್ಪಂದಿಸಿಲ್ಲ, ಇದೀಗ ನಾಯಕತ್ವ ಬದಲಾವಣೆ ನಂತರ ಈ ಸರ್ಕಾರದಿಂದ ಏನೂ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2019ರಲ್ಲಿ ರಾಜ್ಯದಲ್ಲಿ ನೆರೆ ಬಂದಾಗ ಸಾವಿರಾರು ಕೋಟಿ ರೂಪಾಯಿ ಹಾನಿಯಾಗಿದೆ. ಜನರು ಮನೆ-ಮಠ ಕಳೆದುಕೊಂಡಿದ್ದಾರೆ. ಅಲ್ಲದೇ ನೂರಾರು ಜನ ಮೃತಪಟ್ಟಿದ್ದಾರೆ. ಆಗ ಜಾರಿ ಮಾಡಿದ ಪರಿಹಾರವೇ ಈವರೆಗೆ ಜನರಿಗೆ ಸಿಕ್ಕಿಲ್ಲ. ಎಲ್ಲಿ ಹೋದರಲ್ಲಿ ಜನರು ಪರಿಹಾರ ಸಿಕ್ಕಿಲ್ಲ ಅಂತಾ ಪರಿಹಾರಧನ ಕೇಳುತ್ತಿದ್ದಾರೆ ಎಂದರು.