ಧಾರವಾಡ: ಜಿಲ್ಲೆಯಾದ್ಯಂತ ಕರ್ನಾಟಕ ವಿಧಾನ ಪರಿಷತ್ತಿಗೆ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ -2020 ಹಿನ್ನೆಲೆಯಲ್ಲಿ ಮತದಾನ ಮತ್ತು ಮತಗಳ ಎಣಿಕೆ ನಡೆಯುವ ಸಮಯದಲ್ಲಿ ಮದ್ಯಪಾನ, ಮದ್ಯ ಮಾರಾಟ, ಮದ್ಯ ಸಾಗಾಣಿಕೆ ಮತ್ತು ಮದ್ಯ ಸಂಗ್ರಹಣೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಪಶ್ಚಿಮ ಪದವೀಧರರ ಚುನಾವಣೆ ಹಿನ್ನೆಲೆ ಮದ್ಯ ನಿಷೇಧಿಸಿ ಡಿಸಿ ಆದೇಶ
ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಹಿನ್ನೆಲೆ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮದ್ಯ ನಿಷೇಧಿಸಿ ಆದೇಶ ನೀಡಿದ್ದಾರೆ.
ಮತದಾನ ಪೂರ್ವ ಅಕ್ಟೋಬರ್ 26 ರಂದು ಸಾಯಂಕಾಲ 5 ಗಂಟೆಯಿಂದ ಅಕ್ಟೋಬರ್ 28 ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತಗಳ ಎಣಿಕೆ ಹಿನ್ನೆಲೆಯಲ್ಲಿ ನವೆಂಬರ್ 1 ರ ಮಧ್ಯರಾತ್ರಿ 12 ಗಂಟೆಯಿಂದ ನವೆಂಬರ್ 3 ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ, ಮದ್ಯ ಸಾಗಾಣಿಕೆ, ಮದ್ಯ ಸಂಗ್ರಹಣೆಯನ್ನು, ಮದ್ಯದ ಅಂಗಡಿಗಳು, ಬಾರ್ಗಳು, ಕ್ಲಬ್ಗಳು ಮತ್ತು ಮದ್ಯದ ಡಿಪೋಗಳನ್ನು ಮುಚ್ಚತಕ್ಕದ್ದು.
ಇದಕ್ಕೆ ಸಂಬಂಧಿಸಿದಂತೆ ಪರವಾನಿಗೆದಾರರು ಯಾವುದೇ ಪರಿಹಾರಕ್ಕೆ ಅರ್ಹರಾಗುವುದಿಲ್ಲ. ಇದಕ್ಕೆ ಸಂಬಂಧಿಸಿದ ಅಧಿಕಾರಿ ವರ್ಗ ಜಿಲ್ಲೆಯಾದ್ಯಂತ ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಆವಶ್ಯಕ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.