ಕರ್ನಾಟಕ

karnataka

ETV Bharat / state

ಬಾಡಿಗೆ ಮನೆಯಲ್ಲೇ ನೇಣಿಗೆ ಶರಣಾದ ಯುವಕ... ಕಾರಣ ನಿಗೂಢ - undefined

ವಿದ್ಯಾನಗರಿಯಲ್ಲಿ ಬಾಡಿಗೆ ಮನೆಯಲ್ಲಿದ್ದ ಯುವಕನೋರ್ವ ನೇಣಿಗೆ ಶರಣಾಗಿದ್ದಾನೆ. ಈತನ ಸಾವಿಗೆ ಕಾರಣ ತಿಳಿದು ಬಂದಿಲ್ಲ.

ಯುವಕ ನೇಣಿಗೆ ಶರಣು

By

Published : Jun 6, 2019, 2:30 AM IST

ಧಾರವಾಡ:ಮನೆಯ ಮಾಲೀಕರು ಯಾರೂ ಇಲ್ಲದ ವೇಳೆ ಬಾಡಿಗೆಗಿದ್ದ ಯುವಕನೊರ್ವ ನೇಣಿಗೆ ಶರಣಾಗಿರುವ ಘಟನೆ ನಗರದ ಕಮಲಾಪುರ ಬಡಾವಣೆಯಲ್ಲಿ ನಡೆದಿದೆ.

ಸಂಜು ಹುಯಿಲಗೋಳ (೩೦) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಈತ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಸಂಜು ಕಮಲಾಪುರದಲ್ಲಿನ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ, ಮೃತ ದೇಹವನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಉಪನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

For All Latest Updates

TAGGED:

ABOUT THE AUTHOR

...view details