ಕರ್ನಾಟಕ

karnataka

By

Published : Feb 10, 2020, 9:37 PM IST

ETV Bharat / state

ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ: ಅಪಾರ ಪ್ರಮಾಣದ ಕಬ್ಬಿನ ಬೆಳೆ ನಾಶ

ವಿದ್ಯುತ್ ಶಾರ್ಟ್ ಸರ್ಕ್ಯೂಟ್​ ಅವಘಡದಿಂದ ಕಬ್ಬಿನ ಗದ್ದೆ ಹೊತ್ತಿ ಉರಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ನಡೆದಿದೆ.

9 acres of sugar cane burn in short circuit
ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಹೊತ್ತಿ ಉರಿದ 9 ಎಕರೆ ಕಬ್ಬಿನ ಗದ್ದೆ

ಗದಗ: ವಿದ್ಯುತ್ ಶಾರ್ಟ್ ಸರ್ಕ್ಯೂಟ್​ ಅವಘಡದಿಂದ ಕಬ್ಬಿನ ಗದ್ದೆ ಹೊತ್ತಿ ಉರಿದ ಘಟನೆ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ನಡೆದಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಹೊತ್ತಿ ಉರಿದ 9 ಎಕರೆ ಕಬ್ಬಿನ ಗದ್ದೆ

ಗ್ರಾಮದ ಸರೋಜಾ ಸುರೇಶ ಹಳ್ಯಾಳ್ ಎಂಬುವರಿಗೆ ಸೇರಿದ ಕಬ್ಬಿನ ಗದ್ದೆ ಇದಾಗಿದೆ. ಬೆಂಕಿ ಅವಘಡದಲ್ಲಿ ಅಪಾರ ಪ್ರಮಾಣ ಬೆಳೆ ಹಾನಿಯಾಗಿದೆ. 9 ಎಕರೆ ಕಬ್ಬು ಹಾಗೂ 300 ಸಾಗವಾನಿ ಮರಗಳು ಸಹ ಬೆಂಕಿಗೆ ಆಹುತಿಯಾಗಿವೆ.

ಸ್ಥಳಕ್ಕೆ ಆಗಮಸಿದ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದು, ಹೆಸ್ಕಾಂ ಅಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮುಂಡರಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details