ಗದಗ:ಮಲಪ್ರಭಾ ನದಿ ನೀರಿನ ರಭಸಕ್ಕೆ ಸಿಲುಕಿ ವ್ಯಕ್ತಿಯೋರ್ವ ಕೊಚ್ಚಿ ಹೋಗಿರುವ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ.
ಮಲಪ್ರಭಾ ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ, ಮುಂದುವರೆದ ಶೋಧ ಕಾರ್ಯ - ಗದಗ ಲೇಟೆಸ್ಟ್ ನ್ಯೂಸ್
ಮಲಪ್ರಭಾ ನದಿ ನೀರಿನ ರಭಸಕ್ಕೆ ಸಿಲುಕಿ ವ್ಯಕ್ತಿಯೋರ್ವ ಕೊಚ್ಚಿ ಹೋಗಿರುವ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ.
![ಮಲಪ್ರಭಾ ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ, ಮುಂದುವರೆದ ಶೋಧ ಕಾರ್ಯ A man washed himself in the Malaprabha river](https://etvbharatimages.akamaized.net/etvbharat/prod-images/768-512-9136713-thumbnail-3x2-sow.jpg)
ಮಲಪ್ರಭಾ ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ...ಮುಂದುವರೆದ ಶೋಧಕಾರ್ಯ
ಮಲಪ್ರಭಾ ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ, ಮುಂದುವರೆದ ಹುಡುಕಾಟ
ಕೊಣ್ಣೂರ ಗ್ರಾಮದ ವೆಂಕನಗೌಡ ಸಾಲಿಗೌಡ್ರ (40) ನೀರಿನಲ್ಲಿ ಕೊಚ್ಚಿ ಹೋಗಿರುವ ವ್ಯಕ್ತಿ. ಈತ ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕಿನ ಗೋವನಕೊಪ್ಪ ಗ್ರಾಮದ ಬಳಿಯಿದ್ದ ಹೊಲಕ್ಕೆ ಹೋಗಿ ವಾಪಸ್ ಕೊಣ್ಣೂರಿಗೆ ಮರಳುವ ವೇಳೆ ಮಲಪ್ರಭಾ ನದಿ ಸೇತುವೆ ದಾಟುವಾಗ ಈ ಅವಘಡ ಸಂಭವಿಸಿದೆ.
ಸ್ಥಳಕ್ಕೆ ನರಗುಂದ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ದೌಡಯಿಸಿದ್ದು, ವ್ಯಕ್ತಿಗಾಗಿ ಶೋಧ ಕಾರ್ಯ ಮುಂದುವರೆದಿದೆ.