ಕರ್ನಾಟಕ

karnataka

ಮಾಂಸ ತಿಂದು ದೇವಸ್ಥಾನಕ್ಕೆ ಹೋಗುತ್ತೇನೆ ಅನ್ನೋದು ಭಂಡತನ : ಬಿ ವೈ ವಿಜಯೇಂದ್ರ

By

Published : Aug 22, 2022, 3:38 PM IST

ಈ ರಾಜ್ಯದಲ್ಲಿ ಸಂಸ್ಕೃತಿ, ಪರಂಪರೆ ಇದೆ, ಧಾರ್ಮಿಕ ಶ್ರದ್ಧೆ ಇದೆ, ದೈವವನ್ನು ನಂಬಿ ಜೀವನ ನಡೆಸುವ ಅಪಾರ ಜನಸಂಖ್ಯೆ ಇದೆ, ಉನ್ನತ ಸ್ಥಾನದಲ್ಲಿರುವವರು, ರಾಜಕಾರಣದಲ್ಲಿ ಇರುವವರು ಬಹಿರಂಗವಾಗಿ ಹೇಳಿಕೆ ನೀಡ್ತಿದ್ದಾರೆ. ಮಾಂಸ ತಿಂದು ದೇವಸ್ಥಾನಕ್ಕೆ ಹೋಗ್ತೇನಿ ಅನ್ನೋದು ಭಂಡತನ ಎಂದು ಸಿದ್ದರಾಮಯ್ಯ ವಿರುದ್ಧ ಬಿ ವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ವಿಜಯೇಂದ್ರ
ವಿಜಯೇಂದ್ರ

ಗದಗ: ಯಾರು ಏನ್ ಬೇಕಾದ್ರೂ ತಿನ್ನಬಹುದು ಅವರಿಗೆ ಸ್ವಾತಂತ್ರ್ಯ ಇದೆ. ಆದ್ರೆ, ಮಾಂಸ ತಿಂದು ದೇವಸ್ಥಾನಕ್ಕೆ ಹೋಗುತ್ತೇನೆ ಅನ್ನೋದು ಭಂಡತನ. ಇಂತಹ ಹೇಳಿಕೆಯನ್ನ ಯಾರೂ ಒಪ್ಪಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ವಿಜಯೇಂದ್ರ ಕಿಡಿಕಾರಿದ್ದಾರೆ.

ಇಂದು ಶಿರಹಟ್ಟಿ ಮತಕ್ಷೇತ್ರದ ಶಾಸಕ ರಾಮಣ್ಣ ಲಮಾಣಿಯವರ 71ನೇ ಜನ್ಮದಿನೋತ್ಸವಕ್ಕೆ ಬಂದಿರೋ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಲಕ್ಷ್ಮೇಶ್ವರದ ಮುಕ್ತಿಮಂದಿರಕ್ಕೆ ಭೇಟಿ ಕೊಟ್ಟರು, ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ, ಈ ರಾಜ್ಯದಲ್ಲಿ ಸಂಸ್ಕೃತಿ ಪರಂಪರೆ ಇದೆ, ಧಾರ್ಮಿಕ ಶ್ರದ್ಧೆ ಇದೆ, ದೈವವನ್ನು ನಂಬಿ ಜೀವನ ನಡೆಸುವ ಅಪಾರ ಜನ ಸಂಖ್ಯೆ ಇದೆ, ಉನ್ನತ ಸ್ಥಾನದಲ್ಲಿರುವವರು ರಾಜಕಾರಣದಲ್ಲಿ ಇರುವವರು ಬಹಿರಂಗವಾಗಿ ಹೇಳಿಕೆ ನೀಡ್ತಿದ್ದಾರೆ, ರಾಜಕಾರಣಿಗಳ ಹೇಳಿಕೆ, ಇತರರಿಗೆ ಘಾಸಿ ಆಗಬಾರದು ಎಂದ ಅವರು, ಅಧಿಕಾರಕ್ಕೆ ಬಂದೇ ಬಿಟ್ಟಿದ್ದೇವೆ ಅನ್ನೋ ವಿಶ್ವಾಸದಲ್ಲಿ ಕಾಂಗ್ರೆಸ್ ಇದೆ. ಬಿಜೆಪಿ ಹೈಕಮಾಂಡ್​ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರಿಗೆ ಉನ್ನತ ಸ್ಥಾನ ಕೊಟ್ಟಿದ್ದು ಕಾಂಗ್ರೆಸ್ ಗೆ ಆಘಾತ ಆಗಿದೆ ಎಂದು ಲೇವಡಿ ಮಾಡಿದರು.

ಮಾಂಸ ತಿಂದು ದೇವಸ್ಥಾನಕ್ಕೆ ಹೋಗುತ್ತೇನೆ ಅನ್ನೋದು ಭಂಡತನ

ಇನ್ನು, ಧರ್ಮ ಒಡೆಯುವ ಉದ್ದೇಶವಿರಲ್ಲಿಲ್ಲ ಎಂಬ ಸಿದ್ದರಾಮಯ್ಯರ ಪಶ್ಚಾತ್ತಾಪದ ವಿಚಾರವಾಗಿ ಮಾತನಾಡಿದ ಅವರು, ವಿಜಯದ ನಾಗಾಲೋಟಕ್ಕೆ ಯಡಿಯೂರಪ್ಪ ಅಡ್ಡಿ ಆಗುತ್ತಾರೆ ಅನ್ನೋ ಆತಂಕವಾಗಿದೆ. ಯಡಿಯೂರಪ್ಪ ಅವರು ಎಲ್ಲಾ ಜಾತಿ ಜನಾಂಗ ಒಗ್ಗೂಡಿಸುವ ಕೆಲಸ ಮಾಡಿದ್ರು. ಆದ್ರೆ, ಈಗ ಕೆಲ ನಾಯಕರು ಜಾತಿ ಜಾತಿ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುತ್ತಿದ್ದಾರೆ. ತಾವು ಅಧಿಕಾರಕ್ಕೆ ಬರಲ್ಲ ಅಂತಾ ಗೊತ್ತಾದಾಗ ಜಾತಿ ಮಧ್ಯೆ ವಿಷ ಬೀಜ ಬಿತ್ತಿದರು. ಈಗ ವೀರ ಸಾವರ್ಕರ್ ಎಂಬ ಕ್ರಾಂತಿಕಾರಿ ಕುರಿತು ಅವಮಾನ ಮಾಡ್ತಿದ್ದಾರೆ ಎಂದು ಹರಿಹಾಯ್ದರು.

ಇದನ್ನೂ ಓದಿ : ಮೊಟ್ಟೆ ಎಸೆದಿದ್ದಕ್ಕೆ ಮಡಿಕೇರಿ ಚಲೋ ಕೈಬಿಡಿ, ರಾಜ್ಯದ ಸಮಸ್ಯೆಗಳನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿ: ಹೆಚ್‌ ವಿಶ್ವನಾಥ್

ABOUT THE AUTHOR

...view details