ಕರ್ನಾಟಕ

karnataka

ETV Bharat / state

ಗದಗ; ಪೊಲೀಸ್ ವಾಹನಕ್ಕೆ ಬೈಕ್​ ಡಿಕ್ಕಿ; ಯುವಕನಿಗೆ ಗಂಭೀರ ಗಾಯ - ಯಶ್​ ಜನ್ಮದಿನ

ಪೊಲೀಸ್ ವಾಹನಕ್ಕೆ ಸ್ಕೂಟಿ ಡಿಕ್ಕಿ ಹೊಡೆದಿರುವ ಘಟನೆ ಗದಗದ ತೇಜಾ ನಗರ ಬಳಿ ನಡೆದಿದೆ.

ಪೊಲೀಸ್ ವಾಹನಕ್ಕೆ ಬೈಕ್​ ಡಿಕ್ಕಿ
ಪೊಲೀಸ್ ವಾಹನಕ್ಕೆ ಬೈಕ್​ ಡಿಕ್ಕಿ

By ETV Bharat Karnataka Team

Published : Jan 8, 2024, 10:37 PM IST

Updated : Jan 9, 2024, 10:10 AM IST

ಗದಗ :ರಾಕಿಂಗ್ ಸ್ಟಾರ್ ಯಶ್​ಜನ್ಮದಿನಕ್ಕೆಶುಭ ಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆಯ ಬೆನ್ನಲ್ಲೇ ಮತ್ತೊಂದು ದುರ್ಘಟನೆ ಸಂಭವಿಸಿದೆ. ಗದಗದ ತೇಜಾ ನಗರದ ಬಳಿ ಪೊಲೀಸ್ ವಾಹನಕ್ಕೆ ಯುವಕನೋರ್ವನ ಬೈಕ್​ ಡಿಕ್ಕಿಯಾಗಿದೆ. ಪರಿಣಾಮ ಯುವಕ ತೀವ್ರವಾಗಿ ಗಾಯಗೊಂಡಿದ್ದು, ಪೊಲೀಸರೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟಿದ್ದ ಹಿನ್ನೆಲೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮಕ್ಕೆ ಸೋಮವಾರ ಸಂಜೆ ಭೇಟಿ ನೀಡಿದ್ದ ಯಶ್ ಅವರು ಮೃತ​ ಯುವಕರ ಪೋಷಕರಿಗೆ ಸಾಂತ್ವನ ಹೇಳಿದರು. ನಂತರ ಜಿಮ್ಸ್ (ಜಿಲ್ಲಾಸ್ಪತ್ರೆ)ಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿdರು. ಮತ್ತೊಂದೆಡೆ ತನ್ನ ನೆಚ್ಚಿನ ನಟನನ್ನು ನೋಡಲು ಯುವಕನೋರ್ವ ಬೈಕ್​ನಲ್ಲಿ ಬಂದಿದ್ದ ವೇಳೆ ದುರ್ಘಟನೆ ನಡೆದಿದೆ.

ಇದನ್ನೂ ಓದಿ :ಬರ್ತ್​ ಡೇ ಅಂದ್ರೆನೇ ಭಯ ಆಗ್ತಿದೆ, ಮೃತರ ಕುಟುಂಬಗಳಿಗೆ ಅಗತ್ಯ ಸಹಾಯ ಮಾಡುವೆ: ಯುವಕರ ಪೋಷಕರಿಗೆ ಯಶ್​ ಸಾಂತ್ವನ

Last Updated : Jan 9, 2024, 10:10 AM IST

ABOUT THE AUTHOR

...view details