ಗದಗ:ಶಾಲೆಯಿಂದ ಸೈಕಲ್ನಲ್ಲಿ ಬರುತ್ತಿದ್ದ ವಿದ್ಯಾರ್ಥಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದ ಬಳಿ ಸಂಭವಿಸಿದೆ.
ಸೈಕಲ್ನಲ್ಲಿ ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕ ಬಸ್ಗೆ ಸಿಲುಕಿ ಸಾವು - gadag
ಶಾಲೆಯಿಂದ ವಿದ್ಯಾರ್ಥಿ ಸೈಕಲ್ ಮೇಲೆ ಮನೆಗೆ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
![ಸೈಕಲ್ನಲ್ಲಿ ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕ ಬಸ್ಗೆ ಸಿಲುಕಿ ಸಾವು](https://etvbharatimages.akamaized.net/etvbharat/prod-images/768-512-4004378-thumbnail-3x2-jayjpg.jpg)
ಸ್ಥಳದಲ್ಲೇ ಸಾವನ್ನಪ್ಪಿದ ಬಾಲಕ
ದೊಡ್ಡಬೀರಪ್ಪ ಒಡ್ಡಟ್ಟಿ (14) ಮೃತ ವಿದ್ಯಾರ್ಥಿ. ಶಾಲೆಯಿಂದ ವಿದ್ಯಾರ್ಥಿ ಸೈಕಲ್ ಮೇಲೆ ಮನೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮುಂಡರಗಿಯಿಂದ ಹಮ್ಮಿಗಿ ಗ್ರಾಮಕ್ಕೆ ಕೆಎಸ್ಆರ್ಟಿಸಿ ಬಸ್ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಅಪಘಾತದ ಬಳಿಕ ಬಸ್ ಚಾಲಕ ಸ್ಥಳದಲ್ಲೇ ಬಸ್ ಬಿಟ್ಟು ಪರಾರಿಯಾಗಿದ್ದಾನೆ.
ಬಾಲಕನಿಗೆ ಡಿಕ್ಕಿ ಹೊಡೆದ ಬಸ್
ಸ್ಥಳಕ್ಕೆ ಮುಂಡರಗಿ ಸಿಪಿಐ ಶ್ರೀನಿವಾಸ ಮೇಟಿ ಭೇಟಿ ನೀಡಿ ಪರಿಶೀಲಿಸಿದರು. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.