ಗದಗ: ಕೊಣ್ಣೂರ ಬಳಿ ಮಲಪ್ರಭಾ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ.
ಗದಗ: ನದಿಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆ - ವ್ಯಕ್ತಿ ಶವ ಪತ್ತೆ
ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ವ್ಯಕ್ತಿ ತುಂಬಿ ಹರಿಯುತ್ತಿದ್ದ ನದಿ ದಾಟುವಾಗ ನೀರಿನ ರಭಸಕ್ಕೆ ಸಿಲುಕಿ ನಾಪತ್ತೆಯಾಗಿದ್ದ. ನಿನ್ನೆ ಸಂಜೆ ಶವ ಪತ್ತೆಯಾಗಿದೆ.

ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ವ್ಯಕ್ತಿ ತುಂಬಿ ಹರಿಯುತ್ತಿದ್ದ ನದಿ ದಾಟುವಾಗ ನೀರಿನ ರಭಸಕ್ಕೆ ಸಿಲುಕಿ ನಾಪತ್ತೆಯಾಗಿದ್ದ. ಸತತ 4 ದಿನಗಳಿಂದ ಪತ್ತೆ ಕಾರ್ಯ ನಡೆಸಲಾಗಿತ್ತು. ನಿನ್ನೆ ಸಂಜೆ ಶವ ಪತ್ತೆಯಾಗಿದೆ. ಸತತ ನಾಲ್ಕು ದಿನಗಳ ಕಾಲ ಬೋಟ್ ಮೂಲಕ ಪೊಲೀಸರು ಪತ್ತೆ ಕಾರ್ಯಾಚರಣೆ ನಡೆಸುತ್ತಿದ್ದರು. ಕೊಣ್ಣೂರ ಗ್ರಾಮದ ನಿವಾಸಿ ವೆಂಕನಗೌಡ ಸಾಲಿಗೌಡ್ರ ಮೃತ ವ್ಯಕ್ತಿ. ಬೆಳಗ್ಗೆ ಹೊಲಕ್ಕೆ ಹೋಗಿ ವಾಪಸ್ ಕೊಣ್ಣೂರಿಗೆ ಮರಳುವ ವೇಳೆ ಸೇತುವೆ ಮೇಲೆ ತುಂಬಿ ಹರಿಯುತ್ತಿದ್ದ ಮಲಪ್ರಭಾ ನದಿಯನ್ನು ದಾಟುವ ವೇಳೆ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದ.
ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದ ನಿವಾಸಿಯಾಗಿರುವ ಈತ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಗೋವನಕೊಪ್ಪ ಗ್ರಾಮದ ಬಳಿ ಇದ್ದ ಹೊಲಕ್ಕೆ ಹೋಗಿದ್ದ. ಸೇತುವೆ ಮೇಲೆ 5 ಅಡಿಯಷ್ಟು ನೀರು ಇದ್ದು, ಅದನ್ನು ದಾಟುವಾಗ ಅವಘಡ ಸಂಭವಿಸಿತ್ತು. ಇನ್ನು ನರಗುಂದ ಪೊಲೀಸರು ಮತ್ತು ಬಾದಾಮಿ ಪೊಲೀಸರು ಜಂಟಿ ಕಾರ್ಯಾಚರಣೆ ಮಾಡಿ ಶವ ಹೊರ ತೆಗೆದಿದ್ದಾರೆ.