ಕರ್ನಾಟಕ

karnataka

ETV Bharat / state

ಅಬಕಾರಿ ಪೊಲೀಸರ ದಾಳಿ: 4 ಕೆ.ಜಿ ಗಾಂಜಾ ವಶಕ್ಕೆ, ಆರೋಪಿ ಪರಾರಿ

ಅಕ್ರಮವಾಗಿ ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಪೊಲೀಸರು ದಾಳಿ ನಡೆಸಿ 80 ಸಾವಿರ ರೂ. ಮೌಲ್ಯದ ಒಣ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

By

Published : Oct 25, 2020, 12:40 PM IST

Police
Police

ಗದಗ: ಕಳೆದ ಹಲವು ದಿನಗಳಿಂದ ಹುಲಕೋಟಿ ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮನೆ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿ 80 ಸಾವಿರ ರೂ. ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಅಬಕಾರಿ ನಿರೀಕ್ಷಕ ಮಲ್ಲಿಕಾರ್ಜುನ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಈ ವೇಳೆ ಆರೋಪಿ ಪರಾರಿಯಾಗಿದ್ದಾರೆ. ಪರಾರಿಯಾಗಿರುವ ಮಹಿಳೆ ದೇವಕ್ಕ ನಾರಾಯಣ ಬೆಳ್ಳಿಕೊಪ್ಪ ಎಂದು ಗುರುತಿಸಲಾಗಿದ್ದು, ನಾಲ್ಕು ಕೆ.ಜಿ ಒಣ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಕಾರ್ಯಾಚರಣೆಯಲ್ಲಿ ಸಿಬ್ಬಂದಿ ಗುರುರಾಜ್ ವಸ್ತ್ರದ, ಚಂದ್ರು ರಾಠೋಡ್, ನಜೀರ ಖುದಾವಂದ, ಸುರೇಶ್ ಮಳೇಕರ್, ಸವಿತಾ ಕೋಳಿವಾಡ ಪಾಲ್ಗೊಂಡಿದ್ದರು.

ABOUT THE AUTHOR

...view details