ಕರ್ನಾಟಕ

karnataka

ಕೊರೊನಾದಿಂದ ಗುಣಮುಖ: ಗದಗದ ವ್ಯಕ್ತಿ ಬೆಂಗಳೂರಿನ ಆಸ್ಪತ್ರೆಯಿಂದ ಬಿಡುಗಡೆ

By

Published : Jun 11, 2020, 3:15 AM IST

ಕಿಡ್ನಿ ತೊಂದರೆಯಿಂದ ಬಳಲುತ್ತಿದ್ದ ಗದಗದ ವ್ಯಕ್ತಿಯು ಹೆಚ್ಚಿನ ಚಿಕಿತ್ಸೆಗಾಗಿ ಮೇ 27ರಂದು ಖಾಸಗಿ ವಾಹನದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿ, ಹೆಚ್‍ಸಿಎಲ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ. ಆಗ ವ್ಯಕ್ತಿಯಲ್ಲಿ ಕೋವಿಡ್​-19 ಸೋಂಕು ದೃಢಪಟ್ಟಿತ್ತು.

covid-19
ಗದಗದ ವ್ಯಕ್ತಿ ಬೆಂಗಳೂರಿನ ಆಸ್ಪತ್ರೆಯಿಂದ ಬಿಡುಗಡೆ

ಗದಗ :ನಗರದ ಹುಡ್ಕೊ ಕಾಲನಿ ನಿವಾಸಿ 54 ವರ್ಷದ ವ್ಯಕ್ತಿಯು (ಪಿ-4079) ಕೊರೊನಾ ಸೋಂಕಿನಿಂದ ಗುಣಮುಖರಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಈತ ಕಿಡ್ನಿ ತೊಂದರೆಯಿಂದ ಬಳಲುತ್ತಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮೇ 27ರಂದು ಗದಗನಿಂದ ಖಾಸಗಿ ವಾಹನದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿ, ಹೆಚ್‍ಸಿಎಲ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ. ಅಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಿದ ವೇಳೆ ಕೊವಿಡ್-19 ಸೊಂಕು ದೃಢಪಟ್ಟಿತ್ತು.

ಇದೀಗ ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹೀರೆಮಠ ತಿಳಿಸಿದ್ದಾರೆ.

ABOUT THE AUTHOR

...view details