ಕರ್ನಾಟಕ

karnataka

ETV Bharat / state

ಫಿನಾಯಿಲ್​ ಎಂದು ಮೂರ್ಛೆ ದ್ರಾವಣ ಸಿಂಪಡಿಸಿ ಕಳ್ಳತನ ; ಗದಗ ಎಸ್​ಪಿ ಎಚ್ಚರಿಕೆ - Gadag news

ಅಪರಿಚಿತ ಮಹಿಳೆಯರು ಫಿನಾಯಿಲ್ ಮಾರುವ ನೆಪದಲ್ಲಿ ಮನೆಗಳಿಗೆ ಹೋಗಿ, ಮನೆಯಲ್ಲಿರುವವರಿಗೆ ಫಿನಾಯಿಲ್ ಎಂದು ಯಾವುದೋ ದ್ರಾವಣದ ವಾಸನೆ ತೋರಿಸಿದ್ದಾರೆ. ಫಿನಾಯಿಲ್ ವಾಸನೆ ತೆಗೆದುಕೊಂಡಾಕ್ಷಣ ಮನೆಯವರು ಮೂರ್ಛೆ ಹೋಗಿದ್ದಾರೆ..

Gadag SP
ಗದಗ ಎಸ್​ಪಿ ಯತೀಶ್

By

Published : Aug 4, 2020, 2:54 PM IST

ಗದಗ :ಫಿನಾಯಿಲ್ ಮಾರಾಟದ‌ ನೆಪದಲ್ಲಿ ಕಳ್ಳತನ ಮಾಡುವವರಿದ್ದಾರೆ. ಹೀಗಾಗಿ ಗದಗ ಜನರು ಎಚ್ಚರಿಕೆ ವಹಿಸಬೇಕೆಂದು ಗದಗ ಎಸ್‌ಪಿ ಯತೀಶ್ ತಿಳಿಸಿದ್ದಾರೆ.

ಫಿನಾಯಿಲ್ ಸೇರಿ ವಾಸನೆಯಂತಹ ದ್ರಾವಣ ಮಾರಾಟ ಮಾಡುವ ನೆಪದಲ್ಲಿ ಸಂಶಯಾಸ್ಪದ ಅಪರಿಚಿತ ಮಹಿಳೆಯರು ಮನೆ ಅಥವಾ ಓಣಿಗಳಲ್ಲಿ ಕಂಡು ಬಂದ್ರೆ, ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಪೂರ್ವಾಪರ ತಿಳಿದುಕೊಳ್ಳದೆ, ಅಪರಿಚಿತರೊಂದಿಗೆ ವ್ಯವಹರಿಸಬಾರದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್ ಎನ್. ತಿಳಿಸಿದ್ದಾರೆ.

ವಿಜಯಪುರ ಜಿಲ್ಲೆ ಗೋಲಗುಂಬಜ್​ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಗಸ್ಟ್‌ 2ರಂದು ಮಧ್ಯಾಹ್ನ ಸುಮಾರು 30 ವರ್ಷದೊಳಗಿನ 6 ಜನ ಅಪರಿಚಿತ ಮಹಿಳೆಯರು ಫಿನಾಯಿಲ್ ಮಾರುವ ನೆಪದಲ್ಲಿ ಮನೆಗಳಿಗೆ ಹೋಗಿ, ಮನೆಯಲ್ಲಿರುವವರಿಗೆ ಫಿನಾಯಿಲ್ ಎಂದು ಯಾವುದೋ ದ್ರಾವಣದ ವಾಸನೆ ತೋರಿಸಿದ್ದಾರೆ. ಫಿನಾಯಿಲ್ ವಾಸನೆ ತೆಗೆದುಕೊಂಡಾಕ್ಷಣ ಮನೆಯವರು ಮೂರ್ಛೆ ಹೋಗಿದ್ದಾರೆ. ನಂತರ ಮನೆಯೊಳಗೂ ಪ್ರವೇಶ ಮಾಡಿ ಅಲ್ಲಿರುವವರಿಗೂ ಮೂರ್ಛೆ ಹೋಗುವ ದ್ರಾವಣ ಸಿಂಪಡಿಸಿ ಮನೆಯಲ್ಲಿದ್ದ ಸುಮಾರು 4 ತೊಲೆಯಷ್ಟು ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ.

ಹೀಗಾಗಿ ಜಿಲ್ಲೆಯ ಜನರು ಅಪರಿಚಿತ ವ್ಯಕ್ತಿಗಳು ಫಿನಾಯಿಲ್ ಹಾಗೂ ಇನ್ನಿತರ ದ್ರಾವಣ ಮಾರಾಟ ಮಾಡಲು ಬಂದಾಗ ವಾಸನೆ ತೆಗೆದುಕೊಳ್ಳದೆ ಎಚ್ಚರಿಕೆಯಿಂದಿರಬೇಕು. ಓಣಿಗಳಲ್ಲಿ ವಾಸನೆ ತೋರಿಸುವಂತಹ ಯಾವುದೇ ದ್ರಾವಣ ಮಾರಾಟ ಮಾಡುತ್ತಿರುವುದು ಕಂಡು ಬಂದಲ್ಲಿ ಸಾರ್ವಜನಿಕರು ತಕ್ಷಣ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ದೂರವಾಣಿ ಸಂಖ್ಯೆ 08372-238300/100, 9480804400ಗಳಿಗೆ ಮಾಹಿತಿ ನೀಡುವುದರ ಜೊತೆಗೆ ಎಚ್ಚರದಿಂದಿರಬೇಕು ಎಂದು ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

ABOUT THE AUTHOR

...view details