ಕರ್ನಾಟಕ

karnataka

ETV Bharat / state

ಅಪಘಾತದಲ್ಲಿ ಬಾಲಕಿ ಸಾವು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಬೈಕ್​ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

By

Published : Mar 7, 2020, 9:56 PM IST

Girl died in road accident, Girl died in road accident at Gadag, Girl died in road accident news, ರಸ್ತೆ ಅಪಘಾತದಲ್ಲಿ ಬಾಲಕಿ ಸಾವು, ಗದಗದಲ್ಲಿ ರಸ್ತೆ ಅಪಘಾತದಲ್ಲಿ ಬಾಲಕಿ ಸಾವು, ರಸ್ತೆ ಅಪಘಾತದಲ್ಲಿ ಬಾಲಕಿ ಸಾವು ಸುದ್ದಿ,
ಅಪಘಾತದಲ್ಲಿ ಬಾಲಕಿ ಸಾವು

ಗದಗ: ಬೈಕ್​ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿಯಲ್ಲಿ ಕುಳಿತುಕೊಂಡಿದ್ದ ಬಾಲಕಿ ಸ್ಥಳದಲ್ಲೇ ಸಾವುನ್ನಪ್ಪಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.

ಅಪಘಾತದಲ್ಲಿ ಬಾಲಕಿ ಸಾವು

ಟಿಪ್ಪರ್​ವೊಂದು ಬೈಕ್​ಗೆ ಡಿಕ್ಕಿ ಹೊಡೆದು ರತ್ನಾ‌ ಮಹೇಂದ್ರಕರ್ ಎಂಬ 14 ವರ್ಷದ ಬಾಲಕಿ ಮೇಲೆ ಹರಿದಿದೆ. ಅಪಘಾತದಲ್ಲಿ ಇಬ್ಬರಿಗೆ ಗಾಯಗಳಾಗಿವೆ. ಮೃತಪಟ್ಟ ಬಾಲಕಿ ಹಾಗೂ ಗಾಯಾಳು ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮಸ್ಥರು ಎನ್ನಲಾಗಿದೆ.

ಬೈಕ್ ಸವಾರ ಫಕೀರಯ್ಯ ಹಿರೇಮಠ ಹಾಗೂ 2 ವರ್ಷದ ಮಗು ಸಚಿನ್ ಸ್ಥಿತಿ ಚಿಂತಾಜನಕವಾಗಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಟಿಪ್ಪರ್ ಚಾಲಕನ ಅತಿಯಾದ ವೇಗವೇ ಈ ದುರಂತಕ್ಕೆ‌ ಕಾರಣ ಎನ್ನಲಾಗಿದೆ. ಅಪಘಾತ ಸಂಭವಿಸಿದ ಬಳಿಕ ಟಿಪ್ಪರ್​ ಬಾಲಕಿಯನ್ನು ಹತ್ತಾರು ಮೀಟರ್​ವರೆಗೆ ಎಳೆದೊಯ್ದಿದೆ. ಟಿಪ್ಪರ್​ ಲಾರಿಯ ಗಾಲಿಯ ಕೆಳಗೆ ಸಿಲುಕಿದ್ದ ಬಾಲಕಿಯನ್ನು ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಇನ್ನು ಘಟನೆ‌ ನಡೆದ ಕೂಡಲೇ ಚಾಲಕ ವಾಹನ‌ ಬಿಟ್ಟು ಪರಾರಿಯಾಗಿದ್ದಾನೆ. ಈ ಕುರಿತು ಗದಗ ಜಿಲ್ಲೆ‌ ಲಕ್ಷ್ಮೇಶ್ವರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಆರೋಪಿ ಟಿಪ್ಪರ್ ಚಾಲಕನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ABOUT THE AUTHOR

...view details