ಬೆಂಗಳೂರು: ಪ್ರತಿದಿನ ನಮಗೆ 18 ರಿಂದ 20 KL ಆಕ್ಸಿಜನ್ ಒದಗಿಸದೇ ಹೋದರೆ ಗದಗ ಜಿಮ್ಸ್ನಲ್ಲಿ, ಖಾಸಗಿ ಆಸ್ಪತ್ರೆಗಳಲ್ಲಿ ಅಷ್ಟೇ ಏಕೆ, ಆಕ್ಸಿಜನ್, ಬೆಡ್ ಸಿಗದೇ ಆಸ್ಪತ್ರೆ ಆವರಣದಲ್ಲ ಸೋಂಕಿತರು ಸಾವನ್ನಪ್ಪಬೇಕಾಗಿದೀತು ಎಂಬ ಮುನ್ನೆಚ್ಚರಿಕೆಯಿಂದ ಜಾಗೃತರಾಗಿ. ದಯವಿಟ್ಟು ಅಗತ್ಯ ಪೂರೈಕೆಗೆ ತುರ್ತಾಗಿ ವ್ಯವಸ್ಥೆ ಮಾಡಿಸಿ ಎಂದು ಆಗ್ರಹಿಸಿ ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಅವರು ಗದಗ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ಗೆ ಪತ್ರ ಬರೆದಿದ್ದಾರೆ.
ಮೇ 3ರಂದು ನಡೆದ ಸಭೆಯಲ್ಲಿ ಕೋವಿಡ್-19ಕ್ಕೆ ಸಂಬಂಧಿಸಿದ ಹಲವಾರು ವಿಷಯಗಳನ್ನು ಚರ್ಚಿಸಿದ್ದೇವೆ. ನಾನು 12 ಸಲಹೆ ಮಾಡಿದ್ದರ ಬಗ್ಗೆ ತಮಗೆ ನೆನಪಿದೆ ಎಂದು ಭಾವಿಸುವೆ. ಅವುಗಳಲ್ಲಿ ಯಾವುಗಳಾಗಿವೆ?, ಯಾವುವು ಆಗಿಲ್ಲ? ತಾವು ಪರಿಶೀಲನೆ ಮಾಡದಿದ್ದರೆ ತೀವ್ರ ನೋವು ನಿಶ್ಚಿತ. ನೀಡಿದ ಸಲಹೆಗಳು ಗದಗ ಜಿಲ್ಲೆಯ ಜನರ ರಕ್ಷಣೆಗಾಗಿ ನೀಡಿದ ಸಲಹೆಗಳಾಗಿವೆ ಎಂದು ತಿಳಿಸಿದ್ದಾರೆ.
ಸರ್ಕಾರದಿಂದ ವೆಂಟಿಲೇಟರ್ ತರಿಸುವುದರಲ್ಲಿ ನಾನು ವೆಂಟಿಲೇಟರಗಳಿಗೆ ಕನೆಕ್ಟರ್ಗಳಿಲ್ಲ ಎಂದು ಕಳೆದ ಆರು ದಿನಗಳಿಂದ ಅಲ್ಲಿಯೇ 25 ವೆಂಟಿಲೇಟರ್ ಖಾಲಿ ಕುಳಿತಿವೆ. ವೆಂಟಿಲೇಟರ್ ಇಲ್ಲದೇ ಹತ್ತಾರು ನಮ್ಮ ಜನ ಸಾವನ್ನಪ್ಪಿದರು.