ಕರ್ನಾಟಕ

karnataka

By

Published : Aug 15, 2020, 3:50 PM IST

ETV Bharat / state

ಗದಗದಲ್ಲಿ ಸ್ವಾತಂತ್ರ್ಯ ದಿನಾಚರಣೆ: ಧ್ವಜಾರೋಹಣ ನೆರವೇರಿಸಿದ ಸಚಿವ ಸಿ.ಸಿ.ಪಾಟೀಲ್​​

ಗದಗ ನಗರದ ಕೆ.ಹೆಚ್.ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವ ಸಿ.ಸಿ.ಪಾಟೀಲ್ ಧ್ವಜಾರೋಹಣ ನೆರವೇರಿಸಿದರು.

independence day celebration in gadag
ಗದಗ ಜಿಲ್ಲೆಯಲ್ಲಿ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

ಗದಗ: ಜಿಲ್ಲೆಯಲ್ಲಿ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ಕೆ.ಹೆಚ್.ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಧ್ವಜಾರೋಹಣ ನೆರವೇರಿಸಿದರು.

ಪೊಲೀಸ್, ಹೋಮ್ ಗಾರ್ಡ್, ಅಗ್ನಿಶಾಮಕ ದಳದ ಸಿಬ್ಬಂದಿ ಗೌರವ ವಂದನೆ ಸಲ್ಲಿಸಿದರು. ಕೊರೊನಾ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳು ಸೇರಿದಂತೆ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ. ಪಥಸಂಚಲನ, ನೃತ್ಯ, ಸಂಗೀತ ಕಾರ್ಯಕ್ರಮ ಇದ್ಯಾವುದೂ ಈ ಬಾರಿ ಆಯೋಜಿಸಲಾಗಿಲ್ಲ.

ಗದಗ ಜಿಲ್ಲೆಯಲ್ಲಿ 74ನೇ ಸ್ವಾತಂತ್ರ್ಯೋತ್ಸವ

ಕಾರ್ಯಕ್ರಮದಲ್ಲಿ ಗದಗ ಶಾಸಕ ಹೆಚ್.ಕೆ.ಪಾಟೀಲ್, ಜಿಪಂ ಅಧ್ಯಕ್ಷರು, ಉಪಾಧ್ಯಕ್ಷರು, ಡಿಸಿ ಸುಂದರೇಶ್ ಬಾಬು, ಎಸ್​ಪಿ ಯತೀಶ್ ಎನ್., ಸಿಇಒ ಡಾ. ಕೆ.ಆನಂದ, ಎಸಿ ಸೇರಿದಂತೆ ಹಲವು ಅಧಿಕಾರಿಗಳು, ರಾಜಕೀಯ ಮುಖಂಡರು ಭಾಗಿಯಾಗಿದ್ದರು. ಇದೇ ವೇಳೆ ಕೊರೊನಾ ವಾರಿಯರ್ಸ್‌ಗೆ ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.

ABOUT THE AUTHOR

...view details