ಗದಗ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮಂಗಳವಾರ ಸಂಜೆ ಕೆಲವೇ ಕೆಲವು ಬೆಂಬಲಿಗರು ಮತ್ತು ಫೋಟೋ ವಿಡಿಯೋ ಟೀಮ್ನೊಂದಿಗೆ ಬಂದು ಗದಗದ ಬಸವೇಶ್ವರ ಗಾರ್ಡನ್ನಲ್ಲಿ ಕಾಣಿಸಿಕೊಂಡರು. ಬಸವೇಶ್ವರ ಮೂರ್ತಿ ದರ್ಶನಕ್ಕೂ ಮುಂಚೆ ಗದಗನಲ್ಲಿರೋ ಸಚಿವ ಶ್ರೀರಾಮುಲು ಅವರ ಮನೆಗೆ ಹೋಗಿ ಬಂದಿದ್ದಾರೆ. ನಂತರ ಕೆಲ ಹೊತ್ತು ಗಾರ್ಡನ್ನಲ್ಲಿ ವಿಡಿಯೋ, ಫೋಟೋ ಶೂಟ್ ನಡೆಸಿದರು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಸವೇಶ್ವರ ಮೂರ್ತಿ ನೋಡೋದಕ್ಕೆ ಬಂದಿದ್ದೆ ಅಂತಾ ಹೇಳಿದರು. ತೋಂಟದಾರ್ಯ ಸ್ವಾಮೀಜಿಗಳ ಆಶಯದಂತೆ ಬಸವೇಶ್ವರ ಮೂರ್ತಿ ನಿರ್ಮಿಸಲಾಗಿದೆ. ಶ್ರೀರಾಮುಲು ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ, ನಾನು ಪ್ರವಾಸೋದ್ಯಮ ಸಚಿವನಾಗಿದ್ದೆ. ಆಗ ಬಸವೇಶ್ವರ ಪುತ್ಥಳಿ ಸ್ಥಾಪನೆ ಒತ್ತಾಯ ಇತ್ತು. ಈ ಭಾಗದ ಜನರ ಆಶಯದಂತೆ ಪುತ್ಥಳಿ ನಿರ್ಮಾಣವಾಗಿದೆ. ನುಡಿದಂತೆ ನಡೆದಿದ್ದೇವೆ. ನೆನಪಿಗಾಗಿ ಸ್ಥಳಕ್ಕೆ ಭೇಟಿ ನೀಡಿ ಫೋಟೋ ವಿಡಿಯೋ ತೆಗೆದುಕೊಳ್ಳಬೇಕೆಂದಿದ್ದೆ. ಬಸವಣ್ಣ ಜೀವಂತವಾಗಿ, ಸಾಕ್ಷಾತ್ ನಿಂತಂತಿದೆ ಅಂತಾ ಮೂರ್ತಿಯ ಬಗ್ಗೆ ಬಣ್ಣಿಸಿದರು.