ಗದಗ:ತಾಲೂಕು ಕೇಂದ್ರಗಳು ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಅಂಗಡಿ ಮುಗ್ಗಟ್ಟುಗಳೂ ಸೇರಿದಂತೆ ಎಲ್ಲಡೆ ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಹಾಕಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಕರವೇ ಶಿವರಾಮೇಗೌಡ ಬಣದ ಗದಗ ಜಿಲ್ಲಾಧ್ಯಕ್ಷ ಮಂಜುನಾಥ್ ತಿಳಿಸಿದ್ದಾರೆ.
ತಾಲೂಕು, ಪಟ್ಟಣಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯ: ಇಲ್ಲದಿದ್ದರೆ ಮಸಿ ಬಳಿಯೋ ಎಚ್ಚರಿಕೆ - gadaga latest news
ತಾಲೂಕು ಹಾಗೂ ನಗರ ಪ್ರದೇಶಗಳಲ್ಲಿ ಕನ್ನಡ ನಾಮಫಲಕವೇ ಇರಬೇಕು. ಇಲ್ಲದೇ ಹೋದಲ್ಲಿ ಅಂತಹ ನಾಮಫಲಕಗಳಿಗೆ ಮಸಿ ಬಳಿಯಲಾಗುವುದು ಎಂದು ಕರವೇ ಶಿವರಾಮೇಗೌಡ ಬಣದ ಗದಗ ಜಿಲ್ಲಾಧ್ಯಕ್ಷ ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ.
![ತಾಲೂಕು, ಪಟ್ಟಣಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯ: ಇಲ್ಲದಿದ್ದರೆ ಮಸಿ ಬಳಿಯೋ ಎಚ್ಚರಿಕೆ](https://etvbharatimages.akamaized.net/etvbharat/prod-images/768-512-4707581-thumbnail-3x2-gdg.jpg)
ಕರವೇಯಿಂದ ಮಸಿ ಬಳಿಯೋ ಎಚ್ಚರಿಕೆ
ಕರವೇಯಿಂದ ಮಸಿ ಬಳಿಯೋ ಎಚ್ಚರಿಕೆ
ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ತಾಲೂಕು ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸಲು ನವಂಬರ್ 1ರವರೆಗೂ ಸಮಯ ನೀಡಲಾಗಿದೆ. ಒಂದು ವೇಳೆ, ಈ ನಿಯಮ ಜಾರಿಯಾಗದಿದ್ದಲ್ಲಿ ನವಂಬರ್ 1 ರಂದು ನಾಮಫಲಕಗಳಿಗೆ ಮಸಿ ಬಳಿದು ಹೋರಾಟ ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.