ಗದಗ:ಕೊರೊನಾ ಸೋಂಕು ತಗುಲಿದ್ದ ಜಿಲ್ಲೆಯ ಮುಂಡರಗಿ ತಾಲೂಕು ವೈದ್ಯಾಧಿಕಾರಿ ಡಾ.ಕೆ.ಬಸವರಾಜ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮುಂಡರಗಿ ತಾಲೂಕು ವೈದ್ಯಾಧಿಕಾರಿ ಕೊರೊನಾಗೆ ಬಲಿ - ಗದಗ ಸುದ್ದಿ
ಕೊರೊನಾ ಸೋಂಕು ತಗುಲಿದ್ದ ಗದಗ ಜಿಲ್ಲೆಯ ಮುಂಡರಗಿ ತಾಲೂಕು ವೈದ್ಯಾಧಿಕಾರಿ ಡಾ.ಕೆ.ಬಸವರಾಜ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
![ಮುಂಡರಗಿ ತಾಲೂಕು ವೈದ್ಯಾಧಿಕಾರಿ ಕೊರೊನಾಗೆ ಬಲಿ Mundaragi Taluk Dr. K. Basavaraj Death from corona infection](https://etvbharatimages.akamaized.net/etvbharat/prod-images/768-512-8654344-1005-8654344-1599052753529.jpg)
ಮುಂಡರಗಿ ತಾಲೂಕು ವೈದ್ಯಾಧಿಕಾರಿ ಕೊರೊನಾಗೆ ಬಲಿ
43 ವರ್ಷದ ವೈದ್ಯಾಧಿಕಾರಿ ಬಸವರಾಜ್ ಕೊರೊನಾ ವಾರಿಯರ್ ಆಗಿ ಕಾರ್ಯ ನಿರ್ವಹಿಸಿದ್ದರು. ಆದರೆ, ಆಗಸ್ಟ್ 21ರಂದು ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ, ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೇ ಎಕ್ಮೋ ಚಿಕಿತ್ಸೆಗಾಗಿ ಸರ್ಕಾರದ ನೆರವು ಸಹ ಕೋರಿದ್ದರು. ನಂತರ ಡಾ.ಬಸವರಾಜ್ ಅವರ ಸಂಪೂರ್ಣ ಖರ್ಚು ವೆಚ್ಚವನ್ನು ಸರ್ಕಾರವೇ ಭರಿಸುವ ಭರವಸೆ ನೀಡಿತ್ತು.
ಆದರೆ, ವೈದ್ಯಾಧಿಕಾರಿ ಡಾ.ಕೆ.ಬಸವರಾಜ್ ಇಂದು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆಂದು ಗದಗ ಜಿಲ್ಲಾಧಿಕಾರಿ ಸುಂದರೇಶಬಾಬು ಬಾಬು ಸ್ಪಷ್ಟಪಡಿಸಿದ್ದಾರೆ.