ಗದಗ: ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಹಾಗೂ ಪೌರತ್ವ ಕಾಯ್ದೆಯನ್ನು ಬೆಂಬಲಿಸಿ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ತಿರಂಗಾ ಯಾತ್ರೆಯನ್ನು ನಡೆಸಿದರೆ, ರೋಣದಲ್ಲಿ ವಿರೋಧಿ ಸಮಾವೇಶ ನಡೆಯಿತು.
ಅಖಿಲ ಭಾರತ ವಿದ್ಯಾರ್ಥಿ ಪರಿಷತ್(ಎಬಿವಿಪಿ) ವತಿಯಿಂದ ತಿರಂಗಾ ಯಾತ್ರೆ ನಡೆಸಲಾಯಿತು. ಲಕ್ಷ್ಮೇಶ್ವರ ಪಟ್ಟಣದ ಬೀದಿಗಳಲ್ಲಿ ಈ ಯಾತ್ರೆಯನ್ನು ನಡೆಸಿದ ವಿದ್ಯಾರ್ಥಿಗಳು, ಪೌರತ್ವ ಕಾಯ್ದೆಯನ್ನು ಬೆಂಬಲಿಸುವಂತೆ ಜನತೆಗೆ ಕರೆ ನೀಡಿದರು. ಜೊತೆಗೆ ಪೌರತ್ವ ಕಾಯ್ದೆ ಕುರಿತು ಜನ ಜಾಗೃತಿ ಮೂಡಿಸಲಾಯಿತು.