ಕರ್ನಾಟಕ

karnataka

ETV Bharat / state

ರೋಣದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಸಮಾವೇಶ: ಲಕ್ಷ್ಮೇಶ್ವರದಲ್ಲಿ ಕಾಯ್ದೆ ಪರ ಜಾಥ - ಪೌರತ್ವ ಕಾಯ್ದೆಯನ್ನು ಬೆಂಬಲಿಸಿ ಗದಗದಲ್ಲಿ ತಿರಂಗಾ ಯಾತ್ರೆ

ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಹಾಗೂ ಪೌರತ್ವ ಕಾಯ್ದೆಯನ್ನು ಬೆಂಬಲಿಸಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ತಿರಂಗಾ ಯಾತ್ರೆಯನ್ನು ನಡೆಸಲಾಯಿತು. ಮತ್ತೊಂದೆಡೆ ರೋಣದಲ್ಲಿ ಕಾಯ್ದೆ ವಿರೋಧಿಸಿ ಸಮಾವೇಶ ನಡೆಸಲಾಯಿತು.

Citizenship Amendment Act
ಪೌರತ್ವ ತಿದ್ದುಪಡಿ ಕಾಯ್ದೆಗೆ ಪರ-ವಿರೋಧ

By

Published : Jan 20, 2020, 5:05 PM IST

ಗದಗ: ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಹಾಗೂ ಪೌರತ್ವ ಕಾಯ್ದೆಯನ್ನು ಬೆಂಬಲಿಸಿ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ತಿರಂಗಾ ಯಾತ್ರೆಯನ್ನು ನಡೆಸಿದರೆ, ರೋಣದಲ್ಲಿ ವಿರೋಧಿ ಸಮಾವೇಶ ನಡೆಯಿತು.

ಪೌರತ್ವ ತಿದ್ದುಪಡಿ ಕಾಯ್ದೆಗೆ ಪರ-ವಿರೋಧ ನಿಲುವು

ಅಖಿಲ ಭಾರತ ವಿದ್ಯಾರ್ಥಿ ಪರಿಷತ್(ಎಬಿವಿಪಿ) ವತಿಯಿಂದ ತಿರಂಗಾ ಯಾತ್ರೆ ನಡೆಸಲಾಯಿತು. ಲಕ್ಷ್ಮೇಶ್ವರ ಪಟ್ಟಣದ ಬೀದಿಗಳಲ್ಲಿ ಈ ಯಾತ್ರೆಯನ್ನು ನಡೆಸಿದ ವಿದ್ಯಾರ್ಥಿಗಳು, ಪೌರತ್ವ ಕಾಯ್ದೆಯನ್ನು ಬೆಂಬಲಿಸುವಂತೆ ಜನತೆಗೆ ಕರೆ ನೀಡಿದರು. ಜೊತೆಗೆ ಪೌರತ್ವ ಕಾಯ್ದೆ ಕುರಿತು ಜನ ಜಾಗೃತಿ ಮೂಡಿಸಲಾಯಿತು.

ಪೌರತ್ವ ಕಾಯ್ದೆ ವಿರೋಧಿಸಿ ಬೃಹತ್ ಸಮಾವೇಶ:

ಮತ್ತೊಂದೆಡೆ ಪೌರತ್ವ ಕಾಯ್ದೆ ವಿರೋಧಿಸಿ ರೋಣ ಪಟ್ಟಣದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿತ್ತು. ಪಟ್ಟಣದ ಹೊಸ ಸಂತೆ ಬಜಾರ್​ನಲ್ಲಿ ಅಂಜುಮನ್ ಎ ಇಸ್ಲಾಂ ಕಮಿಟಿ ಹಾಗೂ ದಲಿತ ಸಂಘರ್ಷ ಸಮಿತಿಯಿಂದ ಸಮಾವೇಶ ನಡೆಸಲಾಯಿತು. ಈ ಸಮಾವೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿ ಮಾಡಬಾರದು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಯಿತು.

For All Latest Updates

ABOUT THE AUTHOR

...view details