ಗದಗ: ಜಿಲ್ಲೆಯ ರೈತನ ಬದುಕು ಮೊನ್ನೆ ಸುರಿದ ಅಕಾಲಿಕ ಮಳೆಯಿಂದಾಗಿ ಅಕ್ಷರಶಃ ತತ್ತರಿಸಿ ಹೋಗಿದೆ.
ಜಿಲ್ಲೆಯ ಮುಂಡರಗಿ ತಾಲೂಕಿನ ಅಂದಪ್ಪ ಬೆಲ್ಲದ ಎಂಬ ರೈತ ಸಾಲ ಸೂಲ ಮಾಡಿ 6 ಎಕರೆಯಲ್ಲಿ ಏಲಕ್ಕಿ ಬಾಳೆ ಬೆಳೆದಿದ್ದರು. ಮೊನ್ನೆ ಸುರಿದ ಭಾರಿ ಮಳೆಗೆ ಬಾಳೆ ಗಿಡಗಳೆಲ್ಲಾ ನೆಲಕ್ಕುರುಳಿ ಸಂಪೂರ್ಣ ಬೆಳೆ ಕೊಳೆಯುವ ಸ್ಥಿತಿ ಎದುರಾಗಿದೆ. ಪ್ರತಿ ಎಕರೆಗೆ 3 ಲಕ್ಷ ರೂಪಾಯಿಗಳನ್ನು ಖರ್ಚು ಮಾಡಿ 6 ಎಕರೆ ಜಾಗದಲ್ಲಿ ಏಲಕ್ಕಿ ಬಾಳೆ ಬೆಳೆದಿದ್ದರು.