ಕರ್ನಾಟಕ

karnataka

ETV Bharat / state

ಹಂದಿಗಳ ಹಾವಳಿಯಿಂದ ಮೆಕ್ಕೆಜೋಳ ನಾಶ.. ಇವುಗಳ ಕಾಟಕ್ಕೆ ಕೊನೆಯೇ ಇಲ್ವಾ!? - ರೈತ ಚಂದ್ರಗೌಡ ಕರೆಗೌಡ್ರಗೆ ಸೇರಿದ ಬೆಳೆ ನಾಶ

ಸಾವಿರಾರು ರೂಪಾಯಿ ಖರ್ಚು ಮಾಡಿ ಹಗಲು-ರಾತ್ರಿ ಕಷ್ಟಪಟ್ಟರೂ ಪ್ರಯೋಜನವಿಲ್ಲದಂತಾಗಿದೆ. ತಾಲೂಕಿನಲ್ಲಿ ಹಲವು ರೈತರ ಜಮೀನಿನಲ್ಲಿ ಹಂದಿ ಹಾಗೂ ನಾಯಿಗಳ ಕಾಟ ಹೆಚ್ಚಾಗಿದೆ..

pig
ಹಂದಿಗಳ ಹಾವಳಿಗೆ ಮೆಕ್ಕೆಜೋಳ ನಾಶ

By

Published : Dec 4, 2020, 2:40 PM IST

ಗದಗ : ಜಿಲ್ಲೆಯಲ್ಲಿ ಹಂದಿಗಳ ಹಾವಳಿ ಹೆಚ್ಚಾಗಿದೆ. ಕಪ್ಪತಗುಡ್ಡದ ಅಂಚಿನಲ್ಲಿರುವ ಹೊಲ-ಗದ್ದೆಗಳ ರೈತರು ಹಂದಿಗಳ ಕಾಟದಿಂದ ಬೇಸತ್ತು ಹೋಗಿದ್ದಾರೆ. ಹೊಲ, ಗದ್ದೆಗಳಿಗೆ ನಿತ್ಯ ಹಂದಿಗಳು ಲಗ್ಗೆಯಿಟ್ಟು ಬೆಳೆ ನಾಶ ಮಾಡುವುದು ಇಲ್ಲಿ ಮಾಮೂಲಾಗಿದೆ. ಜಿಲ್ಲೆಯ‌ ಲಕ್ಷ್ಮೇಶ್ವರ ತಾಲೂಕಿನ ಗೋವನಾಳ ಗ್ರಾಮದಲ್ಲಿ ಎರಡು ಎಕರೆ ಮೆಕ್ಕೆಜೋಳ ಹಂದಿಗಳ ಹಾವಳಿಗೆ ತುತ್ತಾಗಿದೆ.

ರೈತ ಚಂದ್ರಗೌಡ ಕರೆಗೌಡ್ರ ಎಂಬುವರ ಜಮೀನಿನಲ್ಲಿ ಬೆಳೆದಿದ್ದ 2 ಎಕರೆ ಮೆಕ್ಕೆಜೋಳವನ್ನು ಹಂದಿಗಳು ನಾಶಪಡಿಸಿವೆ. ಬಿತ್ತನೆ ಮಾಡಿದಾಗಿನಿಂದ ಮಳೆ ಕೊರತೆ, ಅತಿವೃಷ್ಟಿ, ಕೀಟಬಾಧೆ, ಇಳುವರಿ‌ ಕುಂಠಿತ ಹೀಗೆ ಹಲವಾರು ಸವಾಲುಗಳ ಮಧ್ಯೆ ಬೆಳೆದು ನಿಂತಿದ್ದ ಬೆಳೆ ಈಗ ಹಂದಿಗಳ ಪಾಲಾಗಿದೆ.

ಹಂದಿಗಳ ಹಾವಳಿಯಿಂದ ಮೆಕ್ಕೆಜೋಳ ನಾಶ

ಸಾವಿರಾರು ರೂಪಾಯಿ ಖರ್ಚು ಮಾಡಿ ಹಗಲು-ರಾತ್ರಿ ಕಷ್ಟಪಟ್ಟರೂ ಪ್ರಯೋಜನವಿಲ್ಲದಂತಾಗಿದೆ. ತಾಲೂಕಿನಲ್ಲಿ ಹಲವು ರೈತರ ಜಮೀನಿನಲ್ಲಿ ಹಂದಿ ಹಾಗೂ ನಾಯಿಗಳ ಕಾಟ ಹೆಚ್ಚಾಗಿದೆ.

ಅಳಿದುಳಿದ ಅತ್ಯಲ್ಪ‌ ಬೆಳೆ ರಕ್ಷಿಸಿಕೊಳ್ಳಲು ಹಗಲು-ರಾತ್ರಿ ರೈತರು ಹಂದಿ ಕಾಯುವ ಕೆಲಸ ಮಾಡ್ತಿದ್ದಾರೆ. ಹಾಗಾಗಿ ಅರಣ್ಯ ಇಲಾಖೆ‌ಯವರು ಹಂದಿಗಳ ಕಾಟದಿಂದ ತಮಗೆ ಮುಕ್ತಿ‌ ನೀಡಬೇಕೆಂದು ರೈತರು ಒತ್ತಾಯಿಸುತ್ತಿದ್ದಾರೆ.

ABOUT THE AUTHOR

...view details