ಹಾಸನ:ಲಂಚ ಪಡೆಯುತ್ತಿದ್ದ ವೇಳೆ ಅಧಿಕಾರಿಯೊಬ್ಬ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಆಲೂರಿನಲ್ಲಿ ನಡೆದಿದೆ. ಆರ್. ಐ. ಹರೀಶ್ ಎಸಿಬಿ ಬಲೆಗೆ ಬಿದ್ದಿರುವ ಅಧಿಕಾರಿ.
ಹಾಸನ: ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡಾಗಿ ಎಸಿಬಿ ಬಲೆಗೆ ಬಿದ್ದ ಅಧಿಕಾರಿ
ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಲಂಚ ಪಡೆಯುತ್ತಿದ್ದ ಅಧಿಕಾರಿಯನ್ನು ಬಂಧಿಸಿದ್ದಾರೆ. ಆಲೂರು ತಾಲೂಕಿನ ಕಸಬಾ ಹೋಬಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹರೀಶ್ ಎಸಿಬಿ ಕೈಗೆ ಸಿಕ್ಕಿಬಿದ್ದಿರುವ ಅಧಿಕಾರಿ.
ಆಲೂರು ತಾಲೂಕಿನ ಕಸಬಾ ಹೋಬಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹರೀಶ್ ವೃದ್ಧಾಪ್ಯ ವೇತನ ವಿಚಾರದಲ್ಲಿ ರಂಗನಾಥ್ ಎಂಬುವರಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ರಂಗನಾಥ್ ಅವರು ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದು, ಲಂಚ ಪಡೆಯುವ ಸಂದರ್ಭದಲ್ಲಿ ಅಧಿಕಾರಿಗಳು ದಾಳಿ ನೆಡೆಸಿದ್ದಾರೆ. ಡಿವೈಎಸ್ಪಿ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಹರೀಶ್ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಹರೀಶ್ ಕುರಿತಾಗಿ ಸಾಕಷ್ಟು ಆರೋಪಗಳು ಮುಂಚೆಯಿಂದಲೂ ಕೇಳಿಬರುತ್ತಿದ್ದವು. ಪ್ರತಿ ಕೆಲಸಕ್ಕೂ ಸಾರ್ವಜನಿಕರಿಂದ ಹರೀಶ್ ಲಂಚದ ಬೇಡಿಕೆ ಇಡುತ್ತಿದ್ದರು ಎಂಬ ಮಾತುಗಳನ್ನು ಸಾರ್ವಜನಿಕರು ಆರೋಪಿಸಿದ್ದಾರೆ. ಈಗ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿರುವ ಹರೀಶ್ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂಬುದು ಜನರ ಒತ್ತಾಯವಾಗಿದೆ.