ಹಾಸನ: ಸಿಐಟಿಯು ನೇತೃತ್ವದಲ್ಲಿ ನಗರದಲ್ಲಿ ಎರಡು ದಿನಗಳಿಂದ ವಿವಿಧ ಬೇಡಿಕೆ ಈಡೇರಿಕೆಗೆ ಅಕ್ಷರ ದಾಸೋಹ ನೌಕರರ ಸಂಘ ಉಪವಾಸ ಸತ್ಯಾಗ್ರಹ ಆರಂಭಿಸಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಅಕ್ಷರ ದಾಸೋಹ ನೌಕರರಿಂದ ಉಪವಾಸ ಸತ್ಯಾಗ್ರಹ - Hassan Akshaya Dashosa Employees Union protests News
ಬಿಸಿಯೂಟ ನೌಕರರಿಗೆ ಕಳೆದ ನಾಲ್ಕು ತಿಂಗಳ ಬಾಕಿ ವೇತನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಮುಂದುವರೆದಿದೆ.
ಅಕ್ಷರ ದಾಸೋಹ ನೌಕರರ ಸಂಘದಿಂದ ಉಪವಾಸ ಸತ್ಯಾಗ್ರಹ
ಬಿಸಿಯೂಟ ನೌಕರರಿಗೆ ಕಳೆದ ನಾಲ್ಕು ತಿಂಗಳ ಬಾಕಿ ವೇತನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಸರಣಿ ಉಪವಾಸ ಸತ್ಯಾಗ್ರಹ ಮುಂದುವರೆದಿದೆ.
ಪ್ರತಿಭಟನೆಯ ನೇತೃತ್ವವನ್ನು ಸಂಘದ ಜಿಲ್ಲಾ ಅಧ್ಯಕ್ಷರಾದ ಎಂಬಿ. ಪುಷ್ಪಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ, ಹಾಸನ ತಾಲೂಕು ಅಧ್ಯಕ್ಷರಾದ ಮೀನಾಕ್ಷಿ, ಖಜಾಂಚಿ ಪುಟ್ಟಲಕ್ಷ್ಮಿ ಇತರರು ಭಾಗವಹಿಸಿದ್ದರು.