ಹಾಸನ: ಲಾಕ್ಡೌನ್ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ.ಬಿ.ಆರ್ ಅಂಬೇಡ್ಕರ್ ಅವರ 129 ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಆರ್.ಗಿರೀಶ್, ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ದೇಶದ ಉತ್ತಮ ಭವಿಷ್ಯಕ್ಕಾಗಿ ಇಂತಹ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಇಂದು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು. ದೇವರು ನೆನಪಿಸಿಕೊಳ್ಳುವಂತೆ ಅಂಬೇಡ್ಕರ್ ರವರನ್ನು ನೆನಪಿಸಿಕೊಳ್ಳಬೇಕು. ದೇಶಕ್ಕೆ ಸಂವಿಧಾನವನ್ನು ನೀಡಿದ್ದು, ಯಾವುದೇ ಒಂದು ಜಾತಿಗೆ ಸೀಮಿತವಾಗದೇ ಎಲ್ಲಾ ಧರ್ಮಕ್ಕೂ ಸಮಾನ ಸಂವಿಧಾನ ನೀಡಿರುವುದರಿಂದ ನಾವುಗಳು ಇಂದು ಶಾಂತಿಯುತವಾಗಿ ಬದುಕು ಸಾಗಿಸುತ್ತಿದ್ದೇವೆ ಎಂದರು.