ಕರ್ನಾಟಕ

karnataka

ETV Bharat / state

ಹಾಸನ: ಬಸ್ ಅಪಘಾತದಲ್ಲಿ ಗಂಭೀರ ಗಾಯಗೊಂಡ ಎಎಸ್ಐ ಸಾವು

ಬಸ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಎಎಸ್​​ಐ ಮಂಜುನಾಥ್ ಅವರನ್ನು ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

By

Published : May 1, 2022, 9:24 AM IST

ASI dies due to road accident at Hassan
ಬಸ್ ಅಪಘಾತ: ಎಎಸ್ಐ ಮಂಜುನಾಥ್ ಸಾವು

ಚನ್ನರಾಯಪಟ್ಟಣ:(ಹಾಸನ):ಬಸ್ ಅಪಘಾತದಲ್ಲಿ ಸಹಾಯಕ ಆರಕ್ಷಕ ನಿರೀಕ್ಷಕ(ಎಎಸ್​​ಐ) ಸಾವಿಗೀಡಾಗಿರುವ ಘಟನೆ ಚನ್ನರಾಯಪಟ್ಟಣದ ಹೊರವಲಯದಲ್ಲಿ ನಡೆದಿದೆ. ಮಂಜುನಾಥ್ (59) ಮೃತ ಪೊಲೀಸ್ ಅಧಿಕಾರಿ. ಪ್ರಸ್ತುತ ಚನ್ನರಾಯಪಟ್ಟಣ ಟೌನ್ ನಿವಾಸಿಯಾಗಿರುವ ಇವರು ಇತ್ತೀಚೆಗಷ್ಟೇ ಮುಂಬಡ್ತಿ ಪಡೆದು ಆರಕ್ಷಕ ಉಪ ನಿರೀಕ್ಷಕರಾಗಿ ಅರಸೀಕೆರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಪ್ರತಿನಿತ್ಯ ಚನ್ನರಾಯಪಟ್ಟಣದಿಂದ ಅರಸೀಕೆರೆಗೆ ಪ್ರಯಾಣ ಬೆಳೆಸಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ್‌ ನಿನ್ನೆ (ಶನಿವಾರ) ಕರ್ತವ್ಯ ಮುಗಿಸಿ ವಾಪಸ್ ಮನೆಗೆ ಹಿಂದಿರುಗುವಾಗ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಇವರನ್ನು ಕೂಡಲೇ ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಎಎಸ್ಐ ಮಂಜುನಾಥ್

ಮಂಜುನಾಥ್, 1993 ಮೇ 5ರಂದು ಪೊಲೀಸ್ ಅಧಿಕಾರಿಯಾಗಿ ನೇಮಕಗೊಂಡಿದ್ದರು. 29 ವರ್ಷಗಳ ಸೇವೆ ಸಲ್ಲಿಸಿದ ಇವರು ನಿವೃತ್ತಿ ಹಂತದಲ್ಲಿದ್ದರು. ಚನ್ನರಾಯಪಟ್ಟಣ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಚಲಿಸುತ್ತಿದ್ದ ರೈಲಿನಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ

ABOUT THE AUTHOR

...view details