ಕರ್ನಾಟಕ

karnataka

ETV Bharat / state

ಹಾಸನಾಂಬ ಕಲಾಕ್ಷೇತ್ರದಲ್ಲಿ ಸ್ವಲ್ಪದರಲ್ಲೇ ತಪ್ಪಿದ ದುರಂತ, ಈಗಲಾದರೂ ಎಚ್ಚೆತ್ತುಕೊಳ್ಳುತ್ತಾ ಸರ್ಕಾರ?

ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆಯುತ್ತಿದ್ದ ಶಿವಯೋಗಿ ಸಿದ್ದರಾಮೇಶ್ವರ ಮತ್ತು ಮಹಾಯೋಗಿ ವೇಮನ ಜಯಂತಿ ಉದ್ಘಾಟನಾ ಸಮಾರಂಭದ ವೇಳೆ ಬೃಹತ್ ಗಾತ್ರದ ಕಬ್ಬಿಣದ ಕಟೌಟ್ ಕೆಳಗೆ ಬಿದ್ದಿದೆ.

By

Published : Jan 17, 2020, 11:46 PM IST

big-disaster-missing-in-hasanamba-temple
ಹಾಸನಾಂಬ ಕಲಾ ಕ್ಷೇತ್ರದಲ್ಲಿ ಸ್ವಲ್ಪದರಲ್ಲೆ ದುರಂತ

ಹಾಸನ: ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆಯುತ್ತಿದ್ದ ಶಿವಯೋಗಿ ಸಿದ್ದರಾಮೇಶ್ವರ ಮತ್ತು ಮಹಾಯೋಗಿ ವೇಮನ ಜಯಂತಿ ಉದ್ಘಾಟನಾ ಸಮಾರಂಭದ ವೇಳೆ ಬೃಹತ್ ಗಾತ್ರದ ಕಬ್ಬಿಣದ ಕಟೌಟ್ ಕೆಳಗೆ ಬಿತ್ತು.

ಜಿಲ್ಲಾಧಿಕಾರಿ ಆರ್.ಗಿರೀಶ್ ಉದ್ಘಾಟನಾ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಕಬ್ಬಿಣದ ಕಟೌಟ್ ದಿಢೀರನೇ ಕಲಾಭವನದ ಕೆಲಸಗಾರ ಮಹಮ್ಮದ್ ಎಂಬಾತನ ಮೇಲೆ ಬಿದ್ದು ತಲೆಗೆ ತೀವ್ರವಾದ ಪೆಟ್ಟು ಬಿದ್ದಿದೆ. ತಕ್ಷಣ ಕಾರ್ಯಕ್ರಮವನ್ನು ಮೊಟಕುಗೊಳಿಸಿ ಚಿಕಿತ್ಸೆಗಾಗಿ ಗಾಯಾಳುವನ್ನು ಎಎಸ್ಪಿ ನಂದಿನಿ ಅವರ ಪೊಲೀಸ್ ವಾಹನದಲ್ಲಿ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು.

ಹಾಸನಾಂಬ ಕಲಾ ಕ್ಷೇತ್ರದಲ್ಲಿ ಸ್ವಲ್ಪದರಲ್ಲೆ ದುರಂತ

ಹಾಸನಾಂಬ ಕಲಾಕ್ಷೇತ್ರದ ದುರಸ್ತಿ ಬಗ್ಗೆ ಜಿಲ್ಲಾಧಿಕಾರಿ ಆರ್. ಗಿರೀಶ್ ಕೂಡ ಬೇಸರವ್ಯಕ್ತಪಡಿಸಿ ದುರಸ್ತಿ ಮಾಡುವ ಭರವಸೆ ನೀಡಿದ್ದಾರೆ.

ABOUT THE AUTHOR

...view details