ಕರ್ನಾಟಕ

karnataka

ETV Bharat / state

ಚುನಾವಣಾ ದ್ವೇಷ; ಬಿಜೆಪಿ ಕಾರ್ಯಕರ್ತನ ಬಾವಿಗೆ ಎಸೆದು ಕೊಲೆ

ಹೊಳೆನರಸೀಪುರ ತಾಲೂಕಿನ ಮಾರಗೊಂಡನಹಳ್ಳಿಯಲ್ಲಿ ಚುನಾವಣಾ ದ್ವೇಷದ ಹಿನ್ನೆಲೆ ಬಿಜೆಪಿ ಕಾರ್ಯಕರ್ತನೊಬ್ಬನನ್ನು ಬಾವಿಗೆ ಎಸೆದು ಕೊಲೆ ಮಾಡಿರುವ ಘಟನೆ ನಡೆದಿದೆ.

By

Published : Jan 18, 2021, 10:48 PM IST

murder
ಕೊಲೆ

ಹಾಸನ:ಯುದ್ಧ ಮುಗಿದ್ರೂ ರಕ್ತಪಾತ ನಿಲ್ಲುತ್ತಿಲ್ಲ ಎಂಬ ಗಾದೆ ಮಾತಿನಂತೆ ಚುನಾವಣೆ ಮುಗಿದರೂ ದ್ವೇಷ ಮಾತ್ರ ಇನ್ನೂ ಮುಗಿದಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ಬಿಜೆಪಿ ಕಾರ್ಯಕರ್ತನೊಬ್ಬನನ್ನು ಕೊಲೆಗೈದಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ.

ಹೊಳೆನರಸೀಪುರ ತಾಲೂಕಿನ ಮಾರಗೊಂಡನಹಳ್ಳಿಯ ಎಂ.ಎನ್. ಮೂರ್ತಿ (50) ಕೊಲೆಯಾದ ಬಿಜೆಪಿ ಕಾರ್ಯಕರ್ತ. ಚುನಾವಣೆ ಸಂದರ್ಭದಲ್ಲಿ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದ ಎಂಬ ಕಾರಣಕ್ಕಾಗಿ ಈತನ ದೇಹಕ್ಕೆ ಕಲ್ಲು ಕಟ್ಟಿ ಬಾವಿಗೆ ಎಸೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ:ಮಾಜಿ ಶಾಸಕ ಅನಿಲ್ ಲಾಡ್ ಕಾರು ಅಪಘಾತ: ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ಇನ್ನು ಸ್ಥಳಕ್ಕೆ ಹೊಳೆನರಸೀಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಕೊಲೆ ಮಾಡಿದ ಆರೋಪಿಗಳ ಹೆಡೆಮುರಿ ಕಟ್ಟಲು ಪೊಲೀಸರು ವಿಶೇಷ ತಂಡ ರಚನೆ ಮಾಡಿದ್ದಾರೆ.

ABOUT THE AUTHOR

...view details