ಕರ್ನಾಟಕ

karnataka

By

Published : Apr 21, 2020, 11:34 PM IST

ETV Bharat / state

ರೈತರಿಂದ ತರಕಾರಿ ಖರೀದಿಸಿ ಬಡವರಿಗೆ ವಿತರಿಸಿದ ಹಾಸನ ಜಿಲ್ಲಾ ಕಾಂಗ್ರೆಸ್​

ಹಾಸನದ ಸಿದ್ದಯ್ಯ ನಗರದಲ್ಲಿ ಕಾಂಗ್ರೆಸ್​ ಪಕ್ಷದ ನೇತೃತ್ವದಲ್ಲಿ ಬಡವರಿಗೆ ಉಚಿತವಾಗಿ ತರಕಾರಿ ವಿತರಿಸಲಾಯಿತು.

Buy vegetables from farmers and distribute them freely to the poor
ರೈತರಿಂದ ತರಕಾರಿ ಖರೀದಿಸಿ ಬಡವರಿಗೆ ಉಚಿತವಾಗಿ ವಿತರಣೆ

ಹಾಸನ: ರೈತರಿಂದ ತರಕಾರಿಗಳನ್ನು ಖರೀದಿಸಿ ಉಚಿತವಾಗಿ ಬಡವರಿಗೆ, ನಿರಾಶ್ರಿತರಿಗೆ ವಿತರಿಸುವ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜನ ಮುಗಿಬಿದ್ದ ಘಟನೆ ಸಿದ್ದಯ್ಯ ನಗರದಲ್ಲಿ ನಡೆದಿದೆ.

ರೈತರಿಂದ ತರಕಾರಿ ಖರೀದಿಸಿ ಬಡವರಿಗೆ ವಿತರಣೆ

ಜಿಲ್ಲಾ ಕಾಂಗ್ರೆಸ್ ವತಿಯಿಂದ ಉಚಿತ ತರಕಾರಿ ಹಂಚುವ ವೇಳೆ ಸಾರ್ವಜನಿಕರು ಏಕಾಏಕಿ ಗುಂಪಾಗಿ ಬಂದಿದ್ದಾರೆ. ರೈತರಿಂದ ತರಕಾರಿಯನ್ನು ನೇರವಾಗಿ ಖರೀದಿಸಿ ಬಡವರಿಗೆ ಉಚಿತವಾಗಿ ನೀಡುವ ಕಾರ್ಯಕ್ರಮ ನಿರಂತರವಾಗಿ ನಡೆಯುತ್ತಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಜಾವಗಲ್ ಮಂಜುನಾಥ್ ಹೇಳಿದರು.

ಈಗಾಗಲೇ ಹಾಸನ ನಗರಸಭಾ ವ್ಯಾಪ್ತಿಯ 7ರಿಂದ 8 ವಾರ್ಡ್​ಗಳಲ್ಲಿ ತರಕಾರಿ ವಿತರಣೆ ಮಾಡಲಾಗಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶದ ಮೇರೆಗೆ ರಾಜ್ಯದಾದ್ಯಂತ ಈ ಕೆಲಸಕ್ಕೆ ಮುಂದಾಗಿದ್ದೇವೆ ಎಂದು ಹೇಳಿದರು.

ABOUT THE AUTHOR

...view details