ಹಾಸನ: ಮುಂದಿನ ಸಾಲಿನ ಬಜೆಟ್ಗೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ರೈತರ ಹಿತ ಕಾಯುವ ನಿಟ್ಟಿನಲ್ಲಿ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಜೊತೆಗೆ ಪ್ರವಾಸೋದ್ಯಮ ಅಭಿವೃದ್ಧಿಗೂ ಒತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಮುಂದಿನ ಸಾಲಿನ ಬಜೆಟ್ ಸಿಎಂ ಸಿದ್ಧತೆ: ಬಜೆಟ್ನಲ್ಲಿ ರೈತರ ಹಿತದೃಷ್ಟಿ ಕಾಯುವ ಭರವಸೆ ಹಾಸನದ ಹಳೆಬೀಡಿನ ಪುಷ್ಪಗಿರಿ ಉತ್ಸವಕ್ಕೆ ಆಗಮಿಸಿದ ವೇಳೆ ಮಾರಗೊಂಡನಹಳ್ಳಿಯ ಹೆಲಿಪ್ಯಾಡ್ನಲ್ಲಿ ಮಾಧ್ಯಮದವರೊಮದಿಗೆ ಮಾತನಾಡಿದ ಅವರು, ರೈತರ ಉತ್ಪನ್ನಗಳು ಹೆಚ್ಚಾಗಬೇಕು ಅದಕ್ಕೆ ಬೆಂಬಲ ಸಿಗುವಂತಹ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದರು.
ಬಜೆಟ್ನಲ್ಲಿ ಹೊಸ ಅಂಶಗಳನ್ನು ಸೇರಿಸುವ ಕುರಿತಂತೆ ಮುಂದಿನ ದಿನಗಳಲ್ಲಿ ಸಭೆಗಳನ್ನು ನಡೆಸಿ ಎಲ್ಲರ ಅಭಿಪ್ರಾಯಗಳನ್ನು ಒಗ್ಗೂಡಿಸಿಕೊಂಡು ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ವಾಲ್ಮೀಕಿ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ವಿಚಾರ ಎಲ್ಲರ ಅಭಿಪ್ರಾಯ ಪಡೆದು ನಂತರ ವರಿಷ್ಠರ ನಿರ್ಧಾರದಂತೆ ಕ್ರಮಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಪ್ರಧಾನಿಯವರು ರಾಜ್ಯಕ್ಕೆ ಆಗಮಿಸಿದಾಗ ಅವರಿಗೆ ರೈತರ ಸಮಸ್ಯೆಯನ್ನ ಗಮನಕ್ಕೆ ತಂದಿದ್ದೇನೆ ಎಂದರು.
ಪ್ರವಾಹ ಸಂತ್ರಸ್ಥರಿಗೆ ಪರಿಹಾರ ನೀಡಲು ಅನುದಾನವನ್ನು ಕೂಡ ಬಿಡುಗಡೆ ಮಾಡಲು ಈಗಾಗಲೇ ಮನವಿ ಸಲ್ಲಿಸಿದ್ದೇನೆ. ಎಲ್ಲವನ್ನು ಪ್ರಧಾನಿಯವರು ಗಮನಿಸಲಿದ್ದಾರೆ ಎಂದು ಹೇಳಿದರು.