ಕರ್ನಾಟಕ

karnataka

ETV Bharat / state

ಹಾಸನದ ಎಪಿಎಂಸಿಯಲ್ಲಿ ಗುಂಪಾಗಿ ಇದ್ದವರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು

ಹಾಸನದ ಎಪಿಎಂಸಿ ಮಾರುಕಟ್ಟೆಯಲ್ಲಿ ಜನರು ಗುಂಪು ಗುಂಪಾಗಿ ಬಂದು ತರಕಾರಿ ವ್ಯಾಪಾರದಲ್ಲಿ ತೊಡಗಿದ್ದಾಗ ಎಸ್ಪಿ ಶ್ರೀನಿವಾಸ್ ಗೌಡ ಲಾಠಿ ರುಚಿ ತೋರಿಸುವ ಮೂಲಕ ಜನಸಂದಣಿ ನಿಯಂತ್ರಿಸಿದರು.

By

Published : Apr 1, 2020, 11:13 PM IST

cops who gave batons to the crowd in the APMC market
ಎಪಿಎಂಸಿ ಮಾರುಕಟ್ಟೆಯಲ್ಲಿ ಗುಂಪಾಗಿ ಇದ್ದವರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು

ಹಾಸನ:ದೇಶದಲ್ಲಿ ಕಾಡುತ್ತಿರುವ ಕೊರೊನಾ ವೈರಸ್ ನಿಯಂತ್ರಿಸಲು ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಆದರೂ ಅದನ್ನು ಲೆಕ್ಕಿಸದೇ ಇದ್ದವರಿಗೆ ಎಸ್ಪಿ ಶ್ರೀನಿವಾಸ್ ಗೌಡ ಲಾಠಿ ರುಚಿ ತೋರಿಸುವ ಮೂಲಕ ಎಪಿಎಂಸಿ ಮಾರುಕಟ್ಟೆಯಲ್ಲಿ ಇದ್ದ ಜನಜಂಗುಳಿಯನ್ನ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.​

​ಎರಡು ವಾರಗಳಿಂದ ಹಾಸನ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಹಗಲು-ರಾತ್ರಿ ಶ್ರಮಿಸುತ್ತಿದ್ದರೂ ಜನರು ಕಾನೂನು ಪಾಲಿಸದೇ ತಮಗೆ ಇಷ್ಟ ಬಂದ ಹಾಗೆ ಓಡಾಡುತ್ತಿದ್ದಾರೆ. ಇನ್ನು ಎಪಿಎಂಸಿ ಮಾರುಕಟ್ಟೆಯಲ್ಲಿ ಜನರು ಗುಂಪು ಗುಂಪಾಗಿ ಬಂದು ತರಕಾರಿ ವ್ಯಾಪಾರದಲ್ಲಿ ತೊಡಗಿದ್ರು.

ಈ ಬಗ್ಗೆ ದೂರು ಬಂದ ಹಿನ್ನೆಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಪೊಲೀಸ್ ಸಿಬ್ಬಂದಿಯೊಂದಿಗೆ ಎಪಿಎಂಸಿ ಮಾರುಕಟ್ಟೆಗೆ ಆಗಮಿಸಿ ಲಾಠಿ ರುಚಿ ತೋರಿಸಿ ಎಚ್ಚರಿಸಿದ್ರು.

ABOUT THE AUTHOR

...view details