ಅರಕಲಗೂಡು: ಹೊ.ನ.ಪುರ ರಸ್ತೆಯ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೆ ಸೋಂಕು ದೃಢಪಟ್ಟಿದ್ದು, ಪೆಟ್ರೋಲ್ ಬಂಕ್ ಅನ್ನು ಮಾಲೀಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದಾರೆ.
ಕೊರೊನಾ ಭೀತಿ.....ಅರಕಲಗೂಡಿನ ಪೆಟ್ರೋಲ್ ಬಂಕ್ ಬಂದ್
ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊರೊನಾ ಸೋಂಕು ಹರಡುವ ಭೀತಿಯಿದ್ದು, ಪೆಟ್ರೋಲ್ ಬಂಕ್ ಅನ್ನು ಮಾಲೀಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದಾರೆ.
Petrol bank
ಹೌದು ಜಿಲ್ಲೆಯಲ್ಲಿ ಕೊರೊನಾ ಭೀತಿ ದಿನೇ-ದಿನೆ ಹೆಚ್ಚಾಗುತ್ತಿದೆ. ಸದ್ಯ ಹೊ.ನ.ಪುರ ರಸ್ತೆಯ ಶ್ರೀದೇವಿ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊರೊನಾ ಸೋಂಕು ಹರಡುವ ಭೀತಿಯಿದ್ದು, ಪೆಟ್ರೋಲ್ ಬಂಕ್ ಅನ್ನು ಮಾಲೀಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಗಿದೆ. ಈ ಪ್ರಕರಣದಿಂದಾಗಿ ಜನರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.