ಕರ್ನಾಟಕ

karnataka

ETV Bharat / state

ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಸಿಪಿಐ ಪ್ರತಿಭಟನೆ - ಸಿಪಿಐ (ಎಂ) ಪ್ರತಿಭಟನೆ

ಕೊರೊನಾ ದಾಳಿ ತಡೆಯುವಲ್ಲಿ ಪ್ರಧಾನಿ ಮೋದಿ ಅವರ ಸಾಧನೆಗೆ ವಿಶ್ವ ಮಾನ್ಯತೆ ದೊರೆತಿದೆ ಎಂದು ಮಾಧ್ಯಮಗಳಲ್ಲಿ ಹೇಳಲಾಗುತ್ತಿದೆ. ದೇಶದಲ್ಲಿ ಕಾಣಿಸಿಕೊಂಡ 3 ಲಕ್ಷಕ್ಕೂ ಅಧಿಕ ಕೊರೊನಾ ಪ್ರಕರಣಗಳ ಪೈಕಿ 12 ಸಾವಿರ ಮಂದಿ ಸರಿಯಾದ ಚಿಕಿತ್ಸೆ ದೊರೆಯದೆ ಸಾವನ್ನಪ್ಪಿರುವುದು ಮೋದಿ ಸರ್ಕಾರದ ಸಾಧನೆಯೆ? ಎಂದು ಪಕ್ಷದ ಕಾರ್ಯಕರ್ತರು ಪ್ರತಿಭಟನೆ ವೇಳೆ ಪ್ರಶ್ನಿಸಿದರು.

CPI protest against central government
ಪ್ರತಿಭಟನೆ

By

Published : Jun 18, 2020, 1:03 PM IST

ಹಾಸನ: ಕೇಂದ್ರ ಸರ್ಕಾರದ ವೈಫಲ್ಯ ಮತ್ತು ‘ಜನ ವಿರೋಧಿ ನೀತಿ’ಗಳ ವಿರುದ್ಧ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್​​​ವಾದಿ) ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಕೊರೊನಾ ದಾಳಿ ತಡೆಯುವಲ್ಲಿ ಪ್ರಧಾನಿ ಮೋದಿ ಅವರ ಸಾಧನೆಗೆ ವಿಶ್ವ ಮಾನ್ಯತೆ ದೊರೆತಿದೆ ಎಂದು ಮಾಧ್ಯಮಗಳಲ್ಲಿ ಹೇಳಲಾಗುತ್ತಿದೆ. ದೇಶದಲ್ಲಿ ಕಾಣಿಸಿಕೊಂಡ 3 ಲಕ್ಷಕ್ಕೂ ಅಧಿಕ ಕೊರೊನಾ ಪ್ರಕರಣಗಳ ಪೈಕಿ 12 ಸಾವಿರ ಮಂದಿ ಸರಿಯಾದ ಚಿಕಿತ್ಸೆ ದೊರೆಯದೆ ಸಾವನ್ನಪ್ಪಿರುವುದು ಮೋದಿ ಸರ್ಕಾರದ ಸಾಧನೆಯೇ? ಎಂದು ಪಕ್ಷದ ಕಾರ್ಯಕರ್ತರು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ಬೇಡಿಕೆಗಳು:

  • ಕೊರೊನಾ ಸಂಕಷ್ಟ ಕಾಲದಲ್ಲಿ ಆದಾಯ ತೆರಿಗೆ ಮಿತಿಯಿಂದ ಹೊರಗಿರುವ ಕುಟುಂಬಗಳಿಗೆ ತಿಂಗಳಿಗೆ ₹ 7,500 ರಂತೆ ಆರು ತಿಂಗಳವರೆಗೆ ನಗದು ವರ್ಗಾವಣೆ ಮಾಡಬೇಕು.
  • ಪ್ರತಿ ವ್ಯಕ್ತಿಗೆ ತಿಂಗಳಿಗೆ 10 ಕೆ.ಜಿ.ಯಂತೆ 6 ತಿಂಗಳವರೆಗೆ ಉಚಿತ ದಿನಸಿ ವಿತರಿಸಬೇಕು.
  • ಉದ್ಯೋಗ ಖಾತ್ರಿ ಅಡಿಯಲ್ಲಿ ಕನಿಷ್ಠ ವರ್ಷದಲ್ಲಿ 200 ದಿನಗಳ ಉದ್ಯೋಗ ನೀಡಬೇಕು. ನಗರದ ಬಡವರಿಗೂ ಉದ್ಯೋಗ ಖಾತ್ರಿ ಯೋಜನೆ ವಿಸ್ತರಿಸಬೇಕು.
  • ನಿರುದ್ಯೋಗಿಗಳಿಗೆ ತಕ್ಷಣವೇ ನಿರುದ್ಯೋಗ ಭತ್ಯೆ ಪ್ರಕಟಿಸಬೇಕು. ರಾಷ್ಟ್ರೀಯ ಆಸ್ತಿಗಳ ಲೂಟಿಯನ್ನು, ಸಾರ್ವಜನಿಕ ವಲಯದ ಖಾಸಗೀಕರಣವನ್ನು ಮತ್ತು ಕಾರ್ಮಿಕ ಕಾನೂನುಗಳ ರದ್ಧತಿಯನ್ನು ನಿಲ್ಲಿಸಬೇಕು.
  • ಕರ್ನಾಟಕದಲ್ಲಿ ಆರೋಗ್ಯ ಪರಿಕರಗಳು, ವೆಂಟಿಲೇಟರ್ಸ್​​​​, ಅಗತ್ಯ ಔಷಧಿಗಳ ಕೊರತೆ ನೀಗಿಸಬೇಕು.

ABOUT THE AUTHOR

...view details