ಕರ್ನಾಟಕ

karnataka

ETV Bharat / state

ಸಕಲೇಶಪುರ: ವನ್ಯ ಜೀವಿ ಸಂರಕ್ಷಣಾ ಸಪ್ತಾಹ ನಿಮಿತ್ತ ಸೈಕಲ್ ಜಾಥಾ - Wildlife Conservation Week latest news

ಶನಿವಾರ ಬೆಳಗ್ಗೆ ಕರ್ನಾಟಕ ಸರ್ಕಾರ ಹಾಗೂ ಅರಣ್ಯ ಇಲಾಖೆಯಿಂದ ವನ್ಯ ಜೀವಿ ಸಂರಕ್ಷಣಾ ಸಪ್ತಾಹ ನಿಮಿತ್ತ ಸೈಕಲ್ ಜಾಥಾ ಉದ್ಘಾಟಿಸಿದರು.

ಸೈಕಲ್ ಜಾಥಾ ಉದ್ಘಾಟನೆ
ಸೈಕಲ್ ಜಾಥಾ ಉದ್ಘಾಟನೆ

By

Published : Oct 3, 2020, 10:41 PM IST

ಸಕಲೇಶಪುರ: ವನ್ಯಜೀವಿಗಳಿಂದ ಜನರನ್ನು ರಕ್ಷಿಸುವ ಕಾರ್ಯಕ್ರಮಗಳನ್ನು ಸರ್ಕಾರ ರೂಪಿಸಬೇಕೆಂದು ಶಾಸಕ ಎಚ್.ಕೆ.ಕುಮಾರಸ್ವಾಮಿ ಹೇಳಿದರು.

ಸೈಕಲ್ ಜಾಥಾ ಉದ್ಘಾಟನೆ

ಪಟ್ಟಣದ ದೊಡ್ಡಕೆರೆ ಆವರಣದಲ್ಲಿ ಶನಿವಾರ ಬೆಳಗ್ಗೆ ಕರ್ನಾಟಕ ಸರ್ಕಾರ ಹಾಗೂ ಅರಣ್ಯ ಇಲಾಖೆಯಿಂದ ವನ್ಯ ಜೀವಿ ಸಂರಕ್ಷಣಾ ಸಪ್ತಾಹದ ನಿಮಿತ್ತ ಸೈಕಲ್ ಜಾಥಾ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ ಈ ಕಾರ್ಯಕ್ರಮ ಆಚರಿಸುತ್ತಿರುವುದು ಸ್ವಾಗತಾರ್ಹ. ಜನಪ್ರತಿನಿಧಿಗಳು, ಅಧಿಕಾರಿಗಳು, ಜನರ ಸಹಾಯದಿಂದ ವನ್ಯಜೀವಿಗಳ ಸಂಖ್ಯೆ ಹೆಚ್ಚಳ ಆಗುತ್ತಿರುವುದು ಒಳ್ಳೆಯದು. ಜೊತೆಗೆ ವನ್ಯಜೀವಿಗಳಿಂದ ಜನರನ್ನು ರಕ್ಷಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಸರ್ಕಾರ ಇದಕ್ಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಕಾಡಿನ ಪ್ರಾಣಿಗಳು ನಾಡಿಗೆ ಬರದಂತೆ ಮಾಡಬೇಕು. ಕಾಡಿನಲ್ಲೇ ಮೇವುಗಳನ್ನು ಬೆಳೆಸಿ ಕಾಡು ಪ್ರಾಣಿಗಳಿಗೆ ಆಹಾರದ ಕೊರತೆ ಇಲ್ಲದಂತೆ ನೋಡಿಕೊಳ್ಳಬೇಕು. ಕಾಡಾನೆ ಸಮಸ್ಯೆ ಇಡೀ ರಾಜ್ಯದಲ್ಲಿ ಸಕಲೇಶಪುರ ಹಾಗೂ ಆಲೂರು ತಾಲೂಕಿನಲ್ಲಿ ಹೆಚ್ಚಿದೆ. ಪ್ರಾಣ ಹಾನಿ ಬೆಳೆಹಾನಿಯಾಗುತ್ತಿದೆ. ಆದರೆ ಇದಕ್ಕೆ ಇನ್ನು ಶಾಶ್ವತ ಪರಿಹಾರ ಸಿಕ್ಕಿರುವುದಿಲ್ಲ. ಕೂಡಲೆ ಸರ್ಕಾರ ಇದಕ್ಕೆ ಶಾಶ್ವತ ಪರಿಹಾರ ಹುಡಕಬೇಕೆಂದು ಹೇಳಿದರು.

ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಂ ಬಾಬು ಮಾತನಾಡಿ, ವನ್ಯಜೀವಿ ಸಪ್ತಾಹ ಅಕ್ಟೋಬರ್ 2 ರಿಂದ ಪ್ರಾರಂಭವಾಗಿ ಅಕ್ಟೋಬರ್ 8 ರಂದು ಮುಕ್ತಾಯಗೊಳ್ಳುತ್ತದೆ. ಕಾರ್ಯಕ್ರಮದ ನಿಮಿತ್ತ ಸೈಕಲ್ ಜಾಥಾ ಆಯೋಜಿಸಲಾಗಿದ್ದು, ಎರಡು ಭಾಗಗಳಾಗಿ ಕಾರ್ಯಕ್ರಮ ವಿಭಜನೆಗೊಂಡಿದೆ. ಪ್ರವಾಸೋದ್ಯಮ ಸಚಿವರಾದ ಸಿ.ಟಿ ರವಿ ಅವರು ಈಗಾಗಲೇ ಮುತ್ತೋಡಿಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ದಾಂಡೇಲಿಯಿಂದ ಬೆಂಗಳೂರಿಗೆ ಒಂದು ತಂಡ ಸೈಕಲ್ ಜಾಥಾ ಹೊರಟಿದ್ದು, ಮತ್ತೊಂದು ತಂಡ ಮುತ್ತೋಡಿಯಿಂದ ಸಕಲೇಶಪುರ, ಸೋಮವಾರಪೇಟೆ, ಕುಶಾಲನಗರ ಮಾರ್ಗವಾಗಿ ಬೆಂಗಳೂರು ತಲುಪುತ್ತದೆ. ಕಾಡನ್ನು ಹಾಗೂ ಕಾಡುಪ್ರಾಣಿಗಳನ್ನು ಉಳಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಉಪವಿಭಾಗಾಧಿಕಾರಿ ಗಿರೀಶ್ ನಂದನ್ ಮಾತನಾಡಿ, ಕಾಡು ಪ್ರಾಣಿಗಳು ಊರಿನತ್ತ ಬರುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಕಾಡುಪ್ರಾಣಿಗಳು ಕಾಡಿನಲ್ಲೆ ಇರಬೇಕು. ಇಂತಹ ವಾತಾವರಣವನ್ನು ಅರಣ್ಯ ಇಲಾಖೆ ಸೃಷ್ಟಿ ಮಾಡಬೇಕು ಎಂದರು.

ABOUT THE AUTHOR

...view details