ಕರ್ನಾಟಕ

karnataka

By

Published : Aug 23, 2019, 9:58 PM IST

ETV Bharat / state

ನಾಪತ್ತೆಯಾಗಿದ್ದ ವ್ಯಕ್ತಿ ಹಾಸನದ ಹೊರವಲಯದಲ್ಲಿ ಶವವಾಗಿ ಪತ್ತೆ..!

ವಾರದ ಹಿಂದೆ ಕಾಣೆಯಾಗಿದ್ದ ವ್ಯಕ್ತಿಯೋರ್ವನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಾಸನದ ಹೊರವಲಯದ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ನಲ್ಲಿ ನಡೆದಿದೆ.

ಮೃತ ವ್ಯಕ್ತಿ

ಹಾಸನ:ವಾರದ ಹಿಂದೆ ಕಾಣೆಯಾಗಿದ್ದ ವ್ಯಕ್ತಿವೋರ್ವ ನಗರಹೊರವಲಯದ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ನಲ್ಲಿಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ರಾಜ ಕಟ್ಟೆಯ ನಿವಾಸಿ ರವಿ (35) ಕೊಲೆಗೀಡಾಗಿರುವ ವ್ಯಕ್ತಿ. ರವಿ ಆ.18 ರಂದು ಕಾಣೆಯಾಗಿದ್ದ. ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ರಾಜಘಟ್ಟದ ರೈಲ್ವೆ ಮೇಲ್ಸೇತುವೆಯ ಕೆಳಗೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆಯಾಗಿರುವ ಶಂಕೆಯನ್ನು ಮೃತನ ಪೋಷಕರು ವ್ಯಕ್ತಪಡಿಸುತ್ತಿದ್ದಾರೆ.

ಹಾಸನದ ಹೊರವಲಯದಲ್ಲಿ ಪತ್ತೆಯಾಯ್ತು ಕಾಣೆಯಾಗಿದ್ದ ವ್ಯಕ್ತಿಯ ಶವ

ರಾಜಘಟ್ಟ ಭಾಗದಲ್ಲಿ ಸಾಕಷ್ಟು ಗಾಂಜಾ ವ್ಯಸನಿಗಳು ರೈಲ್ವೆ ನಿಲ್ದಾಣದ ಬಳಿ ತಮ್ಮ ಅಡ್ಡ ಮಾಡಿಕೊಂಡಿದ್ದು, ಈ ವೇಳೆ ಗಲಾಟೆ ಸಂಭವಿಸಿ ಬಳಿಕ ಕೊಲೆಯಾಗಿರಬಹುದೆಂಬ ಅನುಮಾನವನ್ನು ಕೂಡ ಪೋಷಕರು ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ಮೃತದೇಹವನ್ನ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಹಾಸನದ ಜಯಚಾಮರಾಜೇಂದ್ರ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ವರದಿ ಬಳಿಕ ರವಿಯ ಸಾವಿಗೆ ನಿಖರ ಕಾರಣ ಏನೆಂಬುದು ಗೊತ್ತಾಗಲಿದೆ. ಈ ಸಂಬಂಧ ಕುರಿತು ಈಗಾಗಲೇ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details