ಹಾಸನ:ನಗರದ ಯೂನಿಟಿ ಸ್ಕ್ಯಾನಿಂಗ್ ಸೆಂಟರ್ಗೆ ಜಿಲ್ಲಾಧಿಕಾರಿ ಆರ್. ಗಿರೀಶ್ ಭೇಟಿ ನೀಡಿದ್ದು, ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಸೌಲಭ್ಯವಿದ್ದರೂ ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗೆ ಹೋಗಲು ಬರೆದು ಕೊಟ್ಟ ಪ್ರಕರಣಗಳನ್ನು ಪರಿಶೀಲಿಸಿ ರೋಗಿಗಳಿಂದ ಮಾಹಿತಿ ಪಡೆದು ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿ ಆರ್. ಗಿರೀಶ್ರ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಸತೀಶ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ ಕೃಷ್ಣಮೂರ್ತಿ ಹಾಗೂ ಹಾಸನ ತಾಲೂಕು ವೈದ್ಯಾಧಿಕಾರಿ ಡಾ ವಿಜಯ್ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ ಹಿರಣ್ಣಯ್ಯ ಅವರೊಂದಿಗೆ ನಗರದ ಯೂನಿಟಿ ಸ್ಕ್ಯಾನಿಂಗ್ ಸೆಂಟರ್ಗೆ ಭೇಟಿ ನೀಡಿದರು. ಈ ವೇಳೆ ಜಿಲ್ಲಾಧಿಕಾರಿ ಸರ್ಕಾರಿ ಆಸ್ಪತ್ರೆಯಿಂದ ಚೀಟಿ ಬರೆಸಿ ತಂದಿರುವ ರೋಗಿಗಳನ್ನು ವಿಚಾರಿಸಿ ವೈದ್ಯಾಧಿಕಾರಿಗಳಿಂದಲೂ ವಿವರಣೆ ಪಡೆದುಕೊಂಡರು.