ಕರ್ನಾಟಕ

karnataka

By

Published : Nov 29, 2019, 11:09 PM IST

ETV Bharat / state

ಗೃಹಪ್ರವೇಶದ ಊಟ ಸೇವಿಸಿ 40 ಕ್ಕೂ ಅಧಿಕ ಮಂದಿ ಅಸ್ವಸ್ಥ

ಗೃಹಪ್ರವೇಶದ ಊಟ ಸೇವಿಸಿ 40 ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ.

40 ಕ್ಕೂ ಅಧಿಕ ಮಂದಿ ಅಸ್ವಸ್ಥ
40 ಕ್ಕೂ ಅಧಿಕ ಮಂದಿ ಅಸ್ವಸ್ಥ

ಹಾಸನ: ಗೃಹಪ್ರವೇಶದ ಊಟ ಸೇವಿಸಿ 40 ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ.

40 ಕ್ಕೂ ಅಧಿಕ ಮಂದಿ ಅಸ್ವಸ್ಥ

ಬೇಲೂರು ಪಟ್ಟಣದ ಚನ್ನೇಗೌಡರ ಬೀದಿಯ ಪ್ರಮೋದ್ ಎಂಬುವವರ ಮನೆಯ ಗೃಹಪ್ರವೇಶ ಇಂದು ನಡೆದಿತ್ತು. ಮಧ್ಯಾಹ್ನ ಗೃಹಪ್ರವೇಶದ ಊಟ ಸೇವಿಸಿದ 40ಕ್ಕೂ ಅಧಿಕ ಮಂದಿಗೆ ವಾಂತಿ, ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದ ಸಂಬಂಧಿಕರುಗಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಆಸ್ಪತ್ರೆಯ ವೈದ್ಯಾಧಿಕಾರಿ ನರಸೇಗೌಡ, ಡಾಕ್ಟರ್ ಪ್ರಮೋದ್ ಅಸ್ವಸ್ಥಗೊಂಡ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದು ಜೀವಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಭರವಸೆ ನೀಡಿದ್ದಾರೆ. ಸ್ಥಳಕ್ಕೆ ಪುರಸಭಾ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಆಹಾರದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲು ತೆಗೆದುಕೊಂಡು ಹೋಗಿದ್ದು, ವರದಿ ಬಂದ ನಂತರ ಗೊತ್ತಾಗಲಿದೆ.

ABOUT THE AUTHOR

...view details