ಸಕಲೇಶಪುರ: ಕೋವಿಡ್-19 ಸಂದರ್ಭದಲ್ಲಿ ಜನರಿಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಸೇವೆ ಶ್ಲಾಘನೀಯವಾದದ್ದು ಎಂದು ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷ ಲೋಹಿತ್ ಕೌಡಹಳ್ಳಿ ಹೇಳಿದರು.
ಆಶಾ ಕಾರ್ಯಕರ್ತೆಯರ ಸೇವೆ ಶ್ಲಾಘನೀಯವಾದದ್ದು: ಲೋಹಿತ್ ಕೌಡಹಳ್ಳಿ
ಸಕಲೇಶಪುರದ ಟಿ.ಎ.ಪಿ.ಸಿ.ಎಂ.ಎಸ್ ಸಭಾಂಗಣದಲ್ಲಿ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮವನ್ನು ನೆರವೇರಿಸಿ ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷ ಲೋಹಿತ್ ಕೌಡಹಳ್ಳಿ ಮಾತನಾಡಿ ಆಯಾ ಭಾಗಗಳಲ್ಲಿ ಸಹಕಾರಿ ಸಂಘಗಳು ಆಶಾ ಕಾರ್ಯಕರ್ತೆಯರನ್ನು ಗುರುತಿಸಿ ಸನ್ಮಾನ ಮಾಡಲು ಸರ್ಕಾರ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ 7 ಜನ ಆಶಾ ಕಾರ್ಯಕರ್ತೆಯರಿಗೆ ಸಂಸ್ಥೆ ವತಿಯಿಂದ ಸನ್ಮಾನ ಮಾಡಿ ಪ್ರೋತ್ಸಾಹ ಧನದ ಚೆಕ್ ವಿತರಣೆ ಮಾಡಲಾಗುತ್ತಿದೆ ಎಂದರು.
![ಆಶಾ ಕಾರ್ಯಕರ್ತೆಯರ ಸೇವೆ ಶ್ಲಾಘನೀಯವಾದದ್ದು: ಲೋಹಿತ್ ಕೌಡಹಳ್ಳಿ Sakleshpur](https://etvbharatimages.akamaized.net/etvbharat/prod-images/768-512-7849438-791-7849438-1593607495389.jpg)
ಪಟ್ಟಣದ ಟಿ.ಎ.ಪಿ.ಸಿ.ಎಂ.ಎಸ್ ಸಭಾಂಗಣದಲ್ಲಿ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮವನ್ನು ನೆರವೇರಿಸಿದ ನಂತರ ಮಾತನಾಡಿ ಆಯಾ ಭಾಗಗಳಲ್ಲಿ ಸಹಕಾರಿ ಸಂಘಗಳು ಆಶಾ ಕಾರ್ಯಕರ್ತೆಯರನ್ನು ಗುರುತಿಸಿ ಸನ್ಮಾನ ಮಾಡಲು ಸರ್ಕಾರ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ 7 ಜನ ಆಶಾ ಕಾರ್ಯಕರ್ತೆಯರಿಗೆ ಸಂಸ್ಥೆ ವತಿಯಿಂದ ಸನ್ಮಾನ ಮಾಡಿ ಪ್ರೋತ್ಸಾಹ ಧನದ ಚೆಕ್ ವಿತರಿಸಲಾಗಿದೆ. ತಮ್ಮ ಆರೋಗ್ಯವನ್ನು ಮರೆತು ಪ್ರತಿ ಮನೆ ಮನೆಗಳಿಗೆ ಹೋಗಿ ಮಾಹಿತಿ ಪಡೆಯುತ್ತಿರುವ ಆಶಾ ಕಾರ್ಯಕರ್ತೆಯರ ನಿಸ್ವಾರ್ಥ ಸೇವೆ ಅತ್ಯಂತ ಶ್ಲಾಘನೀಯವಾದದ್ದು ಎಂದರು.
ಈ ಸಂದರ್ಭದಲ್ಲಿ ಟಿ.ಎ.ಪಿ.ಸಿ.ಎಂ.ಎಸ್ ಉಪಾಧ್ಯಕ್ಷೆ ವಜ್ರ ಲೋಕೇಶ್, ಸದಸ್ಯರುಗಳಾದ ಶಶಿಕುಮಾರ್, ಫೈರೋಜ್, ಹಲಸುಲಿಗೆ ರಮೇಶ್, ಶಿವಪ್ಪ ನಾಯಕ್ ಹಾಗೂ ಕಾರ್ಯದರ್ಶಿ ಲೋಕೇಶ್, ಸೋಮಣ್ಣ ಸೇರಿದಂತೆ ಇತರರು ಹಾಜರಿದ್ದರು.