ಹಾಸನ: ಬಾಡೂಟಕ್ಕೆ ಕರೆಯದಿದ್ದಕ್ಕೆ ನಡೆದ ಜಗಳದಲ್ಲಿ ಮಾರಣಾಂತಿಮ ಹಲ್ಲೆಗೊಳಲಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾನೆ. ಈ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಪುರಲೆಹಳ್ಳಿಯಲ್ಲಿ ನಡೆದಿದೆ.
ಶರತ್(28) ಎಂಬ ಯುವಕ ಚಿಕಿತ್ಸೆ ಫಲಿಸದೆ ಸಾವಿಗೀಡಾದವ. ಚೌಡೇಶ್ವರಿ ದೇಗುಲದಲ್ಲಿ ಪೂಜೆ ಮಾಡಿ ಬಾಡೂಟ ಆಯೋಜನೆ ಮಾಡಲಾಗಿತ್ತು. ಶರತ್ನ ಸಂಬಂಧಿಕರು ತಮ್ಮನ್ನ ಕರೆಯದೇ ಬಾಡೂಟ ಮಾಡಿದ್ದೀರಾ? ಎಂದು ಕ್ಯಾತೆ ಎತ್ತಿದ್ದಾರೆ. ಅಲ್ಲದೇ ಪುರಲೆಹಳ್ಳಿಯ ಧನಪಾಲ್, ಅರ್ಜುನ್, ನಟರಾಜ್, ಮಂಜುನಾಥ ಮತ್ತಿತರರು ಶರತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಈ ವೇಳೆ ಶರತ್ ಜೊತೆ ರಾಕೇಶ್, ಯೋಗೇಶ್ ಎಂಬುವವರು ಗಾಯಗೊಂಡಿದ್ದರು.