ಕರ್ನಾಟಕ

karnataka

By

Published : Jan 22, 2020, 1:27 PM IST

ETV Bharat / state

ಹಾಸನದಲ್ಲಿ ಕಸ ವಿಲೇವಾರಿ ಸಮಸ್ಯೆ: ನಗರಸಭೆ ವಿರುದ್ಧ ಸಾರ್ವಜನಿಕರ ಆಕ್ರೋಶ

ನಗರದಲ್ಲಿ ತ್ಯಾಜ್ಯ ವಿಲೇವಾರಿಗೆ ಶಾಶ್ವತ ಪರಿಹಾರ ಕಲ್ಪಿಸಲು ನಗರಸಭೆ ಪ್ರಯತ್ನಿಸುತ್ತಿದ್ದರೆ, ಇತ್ತ ಎಲ್ಲೆಂದರಲ್ಲಿ ಬಿಸಾಡುವ ಕಸದಿಂದ ಜನರು ಪ್ರತಿದಿನ ತೊಂದರೆ ಅನುಭವಿಸಬೇಕಾಗಿದೆ.

KN_HSN_21_20_CITY_GARAGE_SPECIAL_PKG_KA10026
ಹಾಸನದಲ್ಲಿ ಕಸ ವಿಲೇವಾರಿ ಸಮಸ್ಯೆ, ನಗರಸಭೆ ವಿರುದ್ದ ಸಾರ್ವಜನಿಕರ ಆಕ್ರೋಶ ...!

ಹಾಸನ:ನಗರದಲ್ಲಿ ತ್ಯಾಜ್ಯ ವಿಲೇವಾರಿಗೆ ಶಾಶ್ವತ ಪರಿಹಾರ ಕಲ್ಪಿಸಲು ನಗರಸಭೆ ಪ್ರಯತ್ನಿಸುತ್ತಿದ್ದರೆ, ಇತ್ತ ಎಲ್ಲೆಂದರಲ್ಲಿ ಬಿಸಾಡುವ ಕಸದಿಂದ ಜನರು ಪ್ರತಿದಿನ ತೊಂದರೆ ಅನುಭವಿಸಬೇಕಾಗಿದೆ. ಖಾಲಿ ನಿವೇಶನಗಳಲ್ಲೂ ಹೆಚ್ಚಾಗಿ ತ್ಯಾಜ್ಯ ತಂದು ಸುರಿಯಲಾಗುತ್ತಿದೆ. ಇದರಿಂದ ಸುತ್ತಮುತ್ತಲ ನಿವಾಸಿಗಳು ತೊಂದರೆ ಅನುಭವಿಸುವುದು ತಪ್ಪಿಲ್ಲ. ದುರ್ವಾಸನೆಯಿಂದ ಮೂಗು ಮುಚ್ಚಿಕೊಂಡು ಓಡಾಡಬೇಕಾಗಿದೆ. ಕಸದಿಂದಾಗಿ ಸೊಳ್ಳೆಗಳು, ಕ್ರಿಮಿಕೀಟಗಳು ಉತ್ಪತ್ತಿಯಾಗುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ದನಕರುಗಳು ಕಸದ ರಾಶಿಯಲ್ಲಿ ಸಿಗುವ ಪ್ಲಾಸ್ಟಿಕ್ ತಿಂದು ಸಾವಿಗೀಡಾಗುತ್ತಿವೆ.

ಹಾಸನದಲ್ಲಿ ಕಸ ವಿಲೇವಾರಿ ಸಮಸ್ಯೆ: ನಗರಸಭೆ ವಿರುದ್ಧ ಸಾರ್ವಜನಿಕರ ಆಕ್ರೋಶ

ABOUT THE AUTHOR

...view details