ಕರ್ನಾಟಕ

karnataka

By

Published : Jan 2, 2020, 7:11 PM IST

Updated : Jan 2, 2020, 7:44 PM IST

ETV Bharat / state

ಹೊಸ ವರ್ಷದ ಮರುದಿನವೇ ಹಾಸನದಲ್ಲಿ ಮತ್ತೊಂದು ಬರ್ಬರ ಕೊಲೆ

ವೈಯಕ್ತಿಕ ದ್ವೇಷದ ಹಿನ್ನೆಲೆ ವ್ಯಕ್ತಿಯೊಬ್ಬನನ್ನು ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಹಾಸನ ನಗರದ ಹೊರವಲಯದ ಚನ್ನಪಟ್ಟಣ ಬಡಾವಣೆಯಲ್ಲಿ ನಡೆದಿದೆ.

murder
ಕೊಲೆ

ಹಾಸನ:ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ವ್ಯಕ್ತಿಯೊರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನ ನಗರದ ಹೊರವಲಯದ ಚನ್ನಪಟ್ಟಣ ಬಡಾವಣೆಯಲ್ಲಿ ನಡೆದಿದೆ.

ವ್ಯಕ್ತಿಯ ಕೊಲೆ

ಚಂದು (35) ಕೊಲೆಯಾದ ವ್ಯಕ್ತಿಯಾಗಿದ್ದು, ಹಾಸನ ಜಿಲ್ಲೆಯ ಆಲೂರು ತಾಲೂಕಿನ ಅಜ್ಜಿಹಳ್ಳಿ ಗ್ರಾಮದವನೆಂದು ತಿಳಿದು ಬಂದಿದೆ. ದ್ವಿಚಕ್ರ ವಾಹನದಲ್ಲಿ ಬಂದಿದ್ದ ಚಂದು ಎಂಬ ವ್ಯಕ್ತಿಗೆ, ಕೆಲ ದುಷ್ಕರ್ಮಿಗಳು ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದು ಕೊಲೆ ಮಾಡಿದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಹಾಸನದ ಜಯಚಾಮರಾಜೇಂದ್ರ ಶವಾಗಾರಕ್ಕೆ ರವಾನಿಸಲಾಗಿದ್ದು, ಈ ಸಂಬಂಧ ಹಾಸನ ನಗರ ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಿದ್ದಾರೆ.

Last Updated : Jan 2, 2020, 7:44 PM IST

ABOUT THE AUTHOR

...view details