ಕರ್ನಾಟಕ

karnataka

ETV Bharat / state

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರ ಪ್ರತಿಭಟನೆ - ಹಾಸನದಲ್ಲಿ ವಿವಿಧ ಬೇಡಿಕೆ ಆಗ್ರಹಿಸಿ ರೈತರ ಪ್ರತಿಭಟನೆ

ಹಾಸನದ ಜಿಲ್ಲಾಧಿಕಾರಿ ಕಚೇರಿ ಎದುರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಂಟಿಯಾಗಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಕಿಡ್ನಿ ಸಂಬಂಧಿತ ಚಿಕಿತ್ಸೆ ಉಚಿತಗೊಳಿಸಿಬೇಕು ಎಂದು ಆಗ್ರಹಿಸಿದರು.

hassan: kidney-related-treatment-demands-free
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರ ಪ್ರತಿಭಟನೆ

By

Published : Nov 26, 2019, 1:18 PM IST

ಹಾಸನ: ಹೋಬಳಿ ಮಟ್ಟದಲ್ಲಿ ಡಯಾಲಿಸಿಸ್​ ಕೇಂದ್ರ ತೆರೆಯಬೇಕು. ಉಚಿತವಾಗಿ ಕಿಡ್ನಿ ವೈಫಲ್ಯಕ್ಕೆ ಚಿಕಿತ್ಸೆ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರೈತ ಸಂಘ ‌ಹಾಗೂ ಹಸಿರು ಸೇನೆ ‌ಸಂಘಟನೆ ಜಂಟಿಯಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರ ಪ್ರತಿಭಟನೆ

ಹಾಸನ ನಗರದ ಹೇಮಾವತಿ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಹಾಸನದ ಸರ್ಕಾರಿ ಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಬಿಪಿಎಲ್​ ಕಾರ್ಡ್​ದಾರರಿಂದ ಔಷಧೋಪಚಾರಕ್ಕೆ ಅರ್ಧ ಬೆಲೆ ಪಡೆಯುತ್ತಿದ್ದಾರೆ. ಕಿಡ್ನಿ ಸಂಬಂಧಿತ ಬಡ ರೋಗಿಗಳಿಗೆ ಡಯಾಲಿಸಿಸ್​ ಹಾಗೂ ಚುಚ್ಚುಮದ್ದು ಸೇರಿದಂತೆ ಇತರ ಚಿಕಿತ್ಸೆಗೆ ಹೆಚ್ಚಿನ ಖರ್ಚು ಭರಿಸಬೇಕಾಗಿದೆ. ಇದನ್ನು ಸಂಪೂರ್ಣವಾಗಿ ಉಚಿತಗೊಳಿಸಬೇಕು ಎಂದು ಆಗ್ರಹಿಸಿದರು.

ABOUT THE AUTHOR

...view details