ಹಾಸನ: ಹಾಸನಾಂಬೆ ದೇವಾಲಯದ ಬಾಗಿಲು ಇದೇ ತಿಂಗಳ 5ರಂದು ಮಧ್ಯಾಹ್ನ ತೆರೆಯಲಿದೆ ಎಂದು ತಹಶೀಲ್ದಾರ್ ಶಿವಶಂಕರಪ್ಪ ತಿಳಿಸಿದ್ದಾರೆ.
ನ. 5ರಂದು ಹಾಸನಾಂಬೆ ದೇವಾಲಯದ ಬಾಗಿಲು ತೆರೆಯಲಾಗುವುದು: ತಹಶೀಲ್ದಾರ್
ನವೆಂಬರ್ 5ರಿಂದ 16ರವರಗೆ ಹಾಸನಾಂಬೆ ದೇವಾಲಯದ ಬಾಗಿಲು ತೆರೆಯಲಾಗುತ್ತಿದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ ಎಂದು ತಹಶೀಲ್ದಾರ್ ಶಿವಶಂಕರಪ್ಪ ತಿಳಿಸಿದ್ದಾರೆ.
Published : Nov 2, 2020, 5:48 PM IST
Published : Nov 2, 2020, 5:48 PM IST
|Updated : Nov 2, 2020, 6:01 PM IST
ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಇಂದು ಸಾಂಪ್ರದಾಯಿಕವಾಗಿ ದೇವಿಯ ಒಡವೆಗಳನ್ನು ಅರ್ಚಕರಿಗೆ ಹಸ್ತಾಂತರಿಸಿ ಪೂಜೆ ಸಲ್ಲಿಸಲಾಗಿದೆ. ನವೆಂಬರ್ 5ರಿಂದ 16ರವರಗೆ ದೇವಿಯ ದೇಗುಲದ ಬಾಗಿಲು ತೆರೆಯಲಾಗುತ್ತದೆ. ಕೋವಿಡ್ ಹಿನ್ನೆಲೆ ಈ ಬಾರಿ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದ್ದು, ಮೊದಲ ಹಾಗೂ ಕೊನೆಯ ದಿನ ವಿಶೇಷ ಆಹ್ವಾನಿತರಿಗೆ ಮಾತ್ರ ಅವಕಾಶ ಮಾಡಿಕೊಡಲು ಈಗಾಗಲೇ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.
ಸಾರ್ವಜನಿಕರಿಗೆ ಎಲ್ಇಡಿ ಪರದೆ ಮೂಲಕ ನಗರದ ಪ್ರಮುಖ ವೃತ್ತಗಳಲ್ಲಿ ದರ್ಶನದ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.