ಹಾಸನ: ಕುಮಾರಸ್ವಾಮಿ ಸರ್ಕಾರದಲ್ಲಿ ಬಿಡುಗಡೆಯಾಗಿದ್ದ ಎಲ್ಲಾ ಕಾಮಗಾರಿಗೆ ಸರ್ಕಾರ ತಡೆಯೊಡ್ಡಿದ್ದು, ಅವುಗಳನ್ನು ಶೀಘ್ರವಾಗಿ ಮರು ಚಾಲನೆ ನೀಡದಿದ್ದರೇ ನಮ್ಮ ಪಕ್ಷದ 6 ಶಾಸಕರುಗಳು ಬೆಂಗಳೂರಿನ ಮುಖ್ಯಮಂತ್ರಿ ಮನೆಯ ಮುಂದೆ ಪ್ರತಿಭಟನೆ ನಡೆಸುವುದಾಗಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿಯವರ ಕಾಲದಲ್ಲಿ ಮಂಜೂರಾಗಿದ್ದ ಹಾಸನದ ಗ್ರೀನ್ ಏರ್ಪೋರ್ಟ್, ಚಿಕ್ಕಮಗಳೂರು-ಬೇಲೂರು ರೈಲ್ವೆ ಮಾರ್ಗ, 140 ಕೋಟಿ ವ್ಯಚ್ಚದಲ್ಲಿ ಸ್ಥಾಪನೆಯಾಗಬೇಕಿದ್ದ ನೂತನ ಬಂಧಿಖಾನೆ, ಗೊರೂರು-ಹೇಮಾವತಿ ಜಲಾಶಯದ ಅಚ್ಚುಕಟ್ಟು ವ್ಯಾಪ್ತಿಗೆ ಒಳಪಡುವ ಸಕಲೆಶಪುರ, ಅರಕಲಗೂಡು ಮತ್ತು ಹೊಳೆನರಸೀಪುರ ಕ್ಷೇತ್ರದ ಕೃಷಿ ಭೂಮಿಗೆ ನೀರುಣಿಸುವ ಕಾಮಗಾರಿ, ಹೊಸದಾಗಿ ತೋಟಗಾರಿಕೆ ಮಹಾವಿದ್ಯಾಲಯ ಸ್ಥಾಪಿಸಲು ಸರ್ಕಾರದ ಆದೇಶವಾದ್ದು, ಅದನ್ನು ನಮ್ಮ ಹಾಸನದ ಎಂಎಲ್ಎಂ ತಡೆಹಿಡಿದ್ದಾನೆ ಎಂದು ಶಾಸಕ ಪ್ರೀತಂಗೌಡ ಹೆಸರನ್ನು ಹೇಳದೇ ವಾಗ್ದಾಳಿ ನಡೆಸಿದರು.