ಕರ್ನಾಟಕ

karnataka

ETV Bharat / state

ಮನೆಗಳಿಗೆ ನುಗ್ಗಿದ ಮಳೆ ನೀರು: ಸಂಕಷ್ಟದಲ್ಲಿ ಅರಕೆರೆ ಜನತೆ - ಮನೆಗಳಿಗೆ ನುಗ್ಗಿದ ಮಳೆ ನೀರು: ಸಂಕಷ್ಟದಲ್ಲಿ ಅರಕೆರೆ ಜನತೆ

ಇತ್ತೀಚೆಗೆ ಗ್ರಾಮದಲ್ಲಿ ಭಾರಿ ಮಳೆಯಾಗಿದ್ದು, ಗ್ರಾಮದ ಹಲವು ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ತೊಂದರೆಗೀಡಾಗಿದ್ದಾರೆ. ಗ್ರಾಮದಲ್ಲಿ ಚರಂಡಿ ವ್ಯವಸ್ಥೆ ಸರಿಯಿಲ್ಲದಿರುವುದೇ ಸಮಸ್ಯೆಗಳಿಗೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

Hassan District
ಮನೆಗಳಿಗೆ ನುಗ್ಗಿದ ಮಳೆ ನೀರು: ಸಂಕಷ್ಟದಲ್ಲಿ ಅರಕೆರೆ ಜನತೆ

By

Published : Jul 30, 2020, 10:53 PM IST

ಹಾಸನ:ಅರಸೀಕೆರೆ ತಾಲ್ಲೂಕಿಗೆ ಸೇರಿದ ಜಾವಗಲ್ ಸಮೀಪದ ಅರಕೆರೆ ಗ್ರಾಮದಲ್ಲಿ ಮಳೆಯಿಂದಾಗಿ ರಸ್ತೆಗಳು ಕೆರೆಗಳಂತಾಗಿದ್ದು, ಸಾರ್ವಜನಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಮನೆಗಳಿಗೆ ನುಗ್ಗಿದ ಮಳೆ ನೀರು: ಸಂಕಷ್ಟದಲ್ಲಿ ಅರಕೆರೆ ಜನತೆ

ಗ್ರಾಮದಲ್ಲಿ ಚರಂಡಿ ವ್ಯವಸ್ಥೆ ಸರಿಯಿಲ್ಲದಿರುವುದೇ ಈ ಎಲ್ಲಾ ಸಮಸ್ಯೆಗಳಿಗೆ ಕಾರಣ ಎಂದು ಗ್ರಾಮಸ್ಥರು ಹೇಳುತ್ತಾರೆ. ಚರಂಡಿ ವ್ಯವಸ್ಥೆ ಸರಿಮಾಡಿಸಿ ಎಂದು ಈ ಹಿಂದೆಯೇ ಹಲವು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ.

ಮೊದಲೇ ಕೋವಿಡ್ ಸಂಕಷ್ಟದಲ್ಲಿರುವ ಜನರಿಗೆ ಈಗ ಮಳೆಯ ಸಂಕಷ್ಟ ತಂದಿದೆ. ಚರಂಡಿ ಸರಿ ಮಾಡಿಸದ ಪಿಡಿಒ ವಿರುದ್ಧ ಗ್ರಾಮಸ್ಥರು ಎಂದಿನಂತೆ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

For All Latest Updates

ABOUT THE AUTHOR

...view details