ಹಾಸನ: ನಾಮಪತ್ರ ಸಲ್ಲಿಕೆ ವೇಳೆ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಚುನಾವಣಾ ಆಯೋಗಕ್ಕೆ ಸುಳ್ಳು ದಾಖಲಾತಿ ನೀಡಿದ್ದಾರೆ ಎಂದು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಮಂಜು ಆರೋಪಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಸುಳ್ಳು ದಾಖಲೆ ಸಲ್ಲಿಸಿದ್ದಾರೆ: ಎ.ಮಂಜು ಆರೋಪ - undefined
ನಾಮಪತ್ರ ಸಲ್ಲಿಕೆ ವೇಳೆ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಚುನಾವಣ ಆಯೋಗಕ್ಕೆ ಸುಳ್ಳು ದಾಖಲಾತಿ ನೀಡಿದ್ದಾರೆ ಎಂದು ಎ.ಮಂಜು ಆರೋಪಿಸಿದ್ದು, ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
![ಪ್ರಜ್ವಲ್ ರೇವಣ್ಣ ಸುಳ್ಳು ದಾಖಲೆ ಸಲ್ಲಿಸಿದ್ದಾರೆ: ಎ.ಮಂಜು ಆರೋಪ](https://etvbharatimages.akamaized.net/etvbharat/images/768-512-2819385-377-a13193cb-f313-47e1-aafa-03d3fa7a32bb.jpg)
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಮತ್ತು ಭವಾನಿ ಇಬ್ಬರೂ ಎರಡು ಕಂಪನಿಗಳಲ್ಲಿ ಪಾಲುದಾರರಾಗಿದ್ದು, ಶೇ. 20 ರಿಂದ 25 ರಷ್ಟು ಪಾಲು ಹೊಂದಿದ್ದಾರೆ. ಚುನಾವಣೆಗೆ ನಾಮಪತ್ರ ಸಲ್ಲಿಸಬೇಕಾದರೆ ಈ ಅಂಶವನ್ನು ಮರೆ ಮಾಚಲಾಗಿದೆ ಎಂದು ದೂರಿದರು.
ಈ ಕುರಿತು ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಇಂದು ದೂರು ನೀಡಲಾಗಿದ್ದು, ಪರಿಶೀಲಿಸುವುದಾಗಿ ಹಿಂಬರಹ ನೀಡಿದ್ದಾರೆ. ನಮಗೆ ಜಿಲ್ಲಾ ಚುನಾವಣಾ ಅಧಿಕಾರಿಯಿಂದ ನ್ಯಾಯ ಸಿಗದಿದ್ದರೆ ಮುಂದಿನ ಹೋರಾಟ ರೂಪಿಸಲಾಗುವುದು. ಕೇಂದ್ರ ಚುನಾವಣಾ ಆಯೋಗ, ನ್ಯಾಯಾಲಯದಲ್ಲೂ ಈ ವಿರುದ್ಧ ಹೋರಾಟ ನಡೆಸಲಾಗುವುದು. ಚುನಾವಣೆ ಮುಂಚೆಯೇ ಈ ರೀತಿ ಸುಳ್ಳು ದಾಖಲಾತಿ ಸಲ್ಲಿಸುವ ಅಭ್ಯರ್ಥಿಯನ್ನು ಬೆಂಬಲಿಸಬೇಕೇ ಬೇಡವೇ ಎಂಬುದನ್ನು ಜನರು ತೀರ್ಮಾನಿಸುತ್ತಾರೆ. ಚುನಾವಣೆಗೂ ಮೊದಲೇ ಈ ರೀತಿ ತಪ್ಪು ಮಾಹಿತಿ ನೀಡುವವರು ಗೆದ್ದರೆ ಏನೆಲ್ಲಾ ಅನಾಹುತ ಆಗಬಹುದು ಎಂದು ಜನತೆ ಆಲೋಚಿಸಬೇಕು ಎಂದರು.