ಕರ್ನಾಟಕ

karnataka

ETV Bharat / state

ದೇಶದಲ್ಲಿ 2024ರ ಯುಗಾದಿ ವೇಳೆಗೆ ಮತ್ತೊಂದು ದುರ್ಘಟನೆ, ಮಹಾನ್​ ವ್ಯಕ್ತಿಗಳಿಗೆ ದೊಡ್ಡ ಕಂಟಕ: ಕೋಡಿಮಠ ಶ್ರೀ ಭವಿಷ್ಯ

ದೇಶದ ಮಹಾನ್ ವ್ಯಕ್ತಿಗಳಿಗೆ ದೊಡ್ಡ ಕಂಟಕವಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿಗಳು ಭವಿಷ್ಯ ನುಡಿದಿದ್ದಾರೆ.

By

Published : Aug 13, 2023, 9:55 AM IST

kodi mutt sri
ಕೋಡಿಮಠ ಶ್ರೀ

ಭವಿಷ್ಯ ನುಡಿದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ

ಹಾಸನ : ದೇಶದಲ್ಲಿ 2024ರ ಯುಗಾದಿ ವೇಳೆಗೆ ಮತ್ತೊಂದು ದುರ್ಘಟನೆ ಸಂಭವಿಸುತ್ತದೆ. ರಾಷ್ಟ್ರದ ಮಹಾನ್ ವ್ಯಕ್ತಿಗಳಿಗೆ ದೊಡ್ಡ ಕಂಟಕವಿದೆ. ಆಳುವವರು ಎಚ್ಚರ ವಹಿಸಿದರೆ ಅದನ್ನು ತಪ್ಪಿಸಬಹುದು ಎಂದು ಕೋಡಿಮಠದ ಪೀಠಾಧ್ಯಕ್ಷ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಹಳ್ಳಿಯಲ್ಲಿರುವ ಕೋಡಿಮಠದಲ್ಲಿ ಮಾತನಾಡಿದ ಅವರು, " ದೇಶದಲ್ಲಿ ಮತ್ತೊಂದು ದುರ್ಘಟನೆ ನಡೆಯುತ್ತದೆ. ಜಗತ್ತಿನ ಸಾಮ್ರಾಟರೆಲ್ಲಾ ತಲ್ಲಣವಾಗುವ ಕಾಲ ಬರುತ್ತದೆ. ದೊಡ್ಡ ಪಟ್ಟಣಗಳಿಗೆ ಅಪಾಯದ ಸೂಚನೆಯಿದ್ದು, ದೊಡ್ಡ ದೊಡ್ಡ ಕಟ್ಟಡಗಳು ಕುಸಿಯುವ ಸಾಧ್ಯತೆಯಿದೆ. ಅಲ್ಲದೇ, 2024ರ ಯುಗಾದಿಯೊಳಗೆ ಮೂರು ಮಂದಿ ಮಹಾನ್ ವ್ಯಕ್ತಿಗಳಿಗೆ ಅಪಾಯವಿದೆ. ನಮ್ಮನ್ನು ಆಳುವವರು ಎಚ್ಚರ ವಹಿಸಿದರೆ ಈ ದುರ್ಘಟನೆ ತಪ್ಪಿಸಬಹುದು. ಕಾಲ ಬಂದಾಗ ನಾನೇ ಎಲ್ಲವನ್ನು ವಿವರಿಸುತ್ತೇನೆ. ಜೀವನ ಆಡಂಬರ ರಹಿತವಾಗಿರಬೇಕು. ಆಧ್ಯಾತ್ಮಿಕವಾದ ಚಿಂತನೆ ನಮ್ಮಲ್ಲಿರಬೇಕು " ಎಂದರು.

ಇದನ್ನೂ ಓದಿ :ರಾಜ್ಯದಲ್ಲಿ ಭಾರಿ ಮಳೆ, ಜಲಪ್ರಳಯ ಆಗುವ ಲಕ್ಷಣ ಇದೆ : ಕೋಡಿಮಠ ಶ್ರೀ ಭವಿಷ್ಯ

ಇನ್ನು " ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ. ಆದ್ರೆ, ಕೆಲವರು ಬಹುಬೇಗ ಹಣ ಮಾಡುವ ಆಸೆ ಹೊಂದಿದ್ದಾರೆ. ಅದೇ ಅವರಿಗೆ ಆಪತ್ತು ತಂದುಕೊಡುತ್ತದೆ. ಆಘಾತಗಳು ಸಂಭವಿಸಲಿದೆ, ಆದ್ರೆ ಯಾವುದೇ ತೊಂದರೆಯಿಲ್ಲ. ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಆಗುವ ಸಂಭವವಿದೆ. ಹೀಗಾಗಿ, ಸರ್ಕಾರ ಜನರ ಹಿತಕ್ಕಾಗಿ ಬದಲಾಗಬೇಕಿದೆ " ಎಂದರು.

ಇದನ್ನೂ ಓದಿ :ಜನರು ಬಡಿಗೆ ಹಿಡಿದು ಹೋಗುವ ಕಾಲ ಬರಲಿದೆ.. ಕೋಡಿಮಠ ಶ್ರೀ ಭವಿಷ್ಯ

ಮುಂದಿನ ಪ್ರಧಾನಿ ಯಾರಾಗಬೇಕೆಂಬ ಮಾಧ್ಯಮಗಳ ಪ್ರಶ್ನಗೆ ಉತ್ತರ ನೀಡಿದ ಅವರು, ಇಂತಹ ಪ್ರಶ್ನೆಗೆ ಉತ್ತರ ನೀಡುವುದು ಸಾಮಾನ್ಯವಾದ ಸಂಗತಿಯಲ್ಲ. ಅದನ್ನು ಸುಮ್ಮನೆ ಹೇಳುವುದಕ್ಕಾಗುವುದಿಲ್ಲ. ಅದರ ಬಗ್ಗೆ ಜಪ-ತಪಗಳನ್ನು ಮಾಡಬೇಕು. ಆಧ್ಯಾತ್ಮ ಚಿಂತನೆ ಮಾಡಬೇಕಿದೆ. ಪಂಚಾಗ್ನಿ, ಜಲಾಗ್ನಿ, ವಾಯಾಗ್ನಿ ಸೇರಿದಂತೆ 4 ಕಡೆ ಬೆಂಕಿಯನ್ನಿಟ್ಟು, ತಲೆಯ ಮೇಲೆ ಬೆಂಕಿಕುಂಡವಿಟ್ಟು ಧ್ಯಾನ ಮಾಡಬೇಕು. ಮೊನ್ನೆ ಹಿಮಾಲಯದ ಜೋಶಿಮಠ ಮುಳುಗುವ ಮುನ್ನ ಧ್ಯಾನ ಮಗ್ನನಾಗಿದ್ದೆ. ಏಕಾಏಕಿ ಬೆಂಕಿ ನನ್ನ ಉದರದ ಮೇಲೆ ಬಿದ್ದು, ಗಾಯವಾಯ್ತು. ಆಗ ನನಗೆ ಗೌರಿಶಂಕರ ಶಿಖರಕ್ಕೆ, ಜೋಶಿಮಠಕ್ಕೆ ಕಂಟಕವಿದೆ ಎಂದು ಗೊತ್ತಾಯ್ತು. ಹೀಗಾಗಿ ಇಂತಹ ಪ್ರಶ್ನೆಗಳಿಗೆ ಸುಮ್ಮನೆ ಉತ್ತರ ನೀಡಲು ಸಾಧ್ಯವಿಲ್ಲ. ಸಮಯ ಬಂದಾಗ ನಾನೇ ಹೇಳುತ್ತೇನೆ ಎಂದರು.

ಇದನ್ನೂ ಓದಿ :ಜಗತ್ತೇ ಎದ್ದು ನಿಲ್ಲಲಾಗದ ಪರಿಸ್ಥಿತಿ ಒದಗೀತು! : ಕೋಡಿಮಠ ಶ್ರೀ ಭವಿಷ್ಯ

ಈ ಹಿಂದೆ ನುಡಿದ ಭವಿಷ್ಯ: ಕಳೆದ ಜುಲೈ ತಿಂಗಳಲ್ಲಿ ಸಹ ಕೋಡಿಮಠ ಶ್ರೀಗಳು ಭವಿಷ್ಯ ನುಡಿದಿದ್ದರು. ರಾಜ್ಯದಲ್ಲಿ ಸಾಕಷ್ಟು ಮಳೆ ಬರುತ್ತದೆ. ಜೊತೆಗೆ ಜಲಪ್ರಳಯ ಆಗುವ ಲಕ್ಷಣ ಇದೆ. ಜಾಗತಿಕವಾಗಿ ಮೂರು ಗಂಡಾಂತರ ಕಾದಿದೆ. ಒಂದೆರಡು ರಾಷ್ಟ್ರಗಳು ಮುಚ್ಚಿ ಹೋಗಲಿವೆ. ಜನರು ಅಕಾಲಿಕ ಮೃತ್ಯುವಿಗೆ ಸಿಲುಕುವ ಸೂಚನೆ ಇದೆ. ವಿಜಯ ದಶಮಿಯಿಂದ ಸಂಕ್ರಾಂತಿಯವರೆಗೆ ಈ ದುರ್ಘಟನೆಗಳು ನಡೆಯುತ್ತವೆ ಎಂದು ಶ್ರೀಗಳು ಹೇಳಿದ್ದರು.

ABOUT THE AUTHOR

...view details