ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಭಕ್ತಸಾಗರ: ಬೆಳಗ್ಗೆ 4 ಗಂಟೆಯಿಂದಲೇ ಕ್ಯೂ - hasanamba temple news
ವರ್ಷಕೊಮ್ಮೆ ಮಾತ್ರ ಬಾಗಿಲು ತೆರೆದು ದರ್ಶನ ನೀಡುವ ಹಾಸನಾಂಬೆ ದೇವಿಯ ದರುಶನಕ್ಕೆ ರಾಜ್ಯದ ಮೂಲೆ-ಮೂಲೆಗಳಿಂದ ಜನಸಾಗರವೇ ಹರಿದು ಬರುತ್ತಿದೆ.
![ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಭಕ್ತಸಾಗರ: ಬೆಳಗ್ಗೆ 4 ಗಂಟೆಯಿಂದಲೇ ಕ್ಯೂ](https://etvbharatimages.akamaized.net/etvbharat/prod-images/768-512-4839865-thumbnail-3x2-suryajpeg.jpg)
ಹಾಸನಾಂಬೆ ದರುಶನಕ್ಕೆ ಹರಿದು ಬಂದ ಜನಸಾಗರ
ಹಾಸನ :ವರ್ಷಕೊಮ್ಮೆ ಮಾತ್ರ ಬಾಗಿಲು ತೆರೆದು ದರ್ಶನ ನೀಡುವ ಹಾಸನಾಂಬೆ ಭಕ್ತರ ಪಾಲಿಗೆ ಬೇಡಿದ್ದನ್ನು ಕರುಣಿಸುವ ಶಕ್ತಿದೇವತೆ. ಈ ದೇವಿಯ ದರುಶನಕ್ಕೆ ರಾಜ್ಯದ ಮೂಲೆ-ಮೂಲೆಗಳಿಂದ ಜನಸಾಗರವೇ ಹರಿದು ಬರುತ್ತಿದೆ. ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕಾಗಿ ಭಕ್ತರ ದಂಡೇ ಹರಿದು ಬರುತ್ತಿದೆ. ಪ್ರಾತ:ಕಾಲ ಜಾವ 4 ಗಂಟೆಯಿಂದಲೇ ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ಹಾಸನಾಂಬೆ ದರುಶನಕ್ಕೆ ಹರಿದು ಬಂದ ಜನಸಾಗರ