ಕರ್ನಾಟಕ

karnataka

ETV Bharat / state

ಹೇಮಾವತಿ ಕಾಲುವೆಯಲ್ಲಿ ಸ್ನಾನ ಮಾಡಲು ಹೋಗಿ ಉಪನ್ಯಾಸಕ ಸಾವು - Lecturer died news

ಹೇಮಾವತಿಯ ಉಪ ಕೆನಾಲ್​ ಸಾಹುಕಾರ್ ಚನ್ನಯ್ಯ ನಾಲೆಯಲ್ಲಿ ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಇಳಿದ ಉಪನ್ಯಾಸಕರೊಬ್ಬರು ಕಾಲು ಜಾರಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.

ಹೇಮಾವತಿ ಕಾಲುವೆಯಲ್ಲಿ ಸ್ನಾನ ಮಾಡಲು ಹೋಗಿ ಉಪನ್ಯಾಸಕ ಸಾವು

By

Published : Nov 4, 2019, 3:43 PM IST

ಹಾಸನ:ಹೇಮಾವತಿ ಕಾಲುವೆಯಲ್ಲಿ ಸ್ನಾನ ಮಾಡಲು ಹೋಗಿ ಕಾಲು ಜಾರಿ ಬಿದ್ದು ಉಪನ್ಯಾಸಕರೊಬ್ಬರು ಸಾವಿಗೀಡಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.

ತುಳಸಿ ಪ್ರಸಾದ್ (32) ಸಾವಿಗೀಡಾದ ಮೃತ ಉಪನ್ಯಾಸಕ. ನಿನ್ನೆ ಮಧ್ಯಾಹ್ನ ರಜೆ ಇದ್ದುದರಿಂದ ಚನ್ನರಾಯಪಟ್ಟಣ ಸಮೀಪದ ಶ್ರವಣಬೆಳಗೊಳದಲ್ಲಿ ಹಾದುಹೋಗಿರುವ ಹೇಮಾವತಿಯ ಉಪ ನಾಲೆ ಸಾಹುಕಾರ್ ಚನ್ನಯ್ಯ ನಾಲೆಯಲ್ಲಿ ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಇಳಿದಾಗ ಕಾಲು ಜಾರಿ ನೀರಿನಲ್ಲಿ ಕೊಚ್ಚಿ ಹೋಗಿದ್ದರು.

ಹೇಮಾವತಿ ಕಾಲುವೆಯಲ್ಲಿ ಸ್ನಾನ ಮಾಡಲು ಹೋಗಿ ಉಪನ್ಯಾಸಕ ಸಾವು

ನಾಲೆಯು ಪೂರ್ಣ ಪ್ರಮಾಣದಲ್ಲಿ ತುಂಬಿ ಹರಿಯುತ್ತಿರುವುದರಿಂದ ಮೃತದೇಹದ ಹುಡುಕಾಟಕ್ಕೆ ಸ್ವಲ್ಪ ಕಷ್ಟವಾಗಿತ್ತು. ಇಂದು ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಬೈರಾಪುರ ಕಾಲುವೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಕೆ ಆರ್ ಪೇಟೆಯ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ.

ಮೂಲತಃ ಚನ್ನರಾಯಪಟ್ಟಣದ ಕಾಳಿನಲ್ಲಿಯವರಾದ ತುಳಸಿ ಪ್ರಸಾದ್ ಕಳೆದ ಐದಾರು ವರ್ಷಗಳಿಂದ ಪಟ್ಟಣದ ಖಾಸಗಿ ಶಾಲೆಯಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು. ನಂತರ ಮದ್ದೂರು ತಾಲೂಕಿನ ಬೆಸಗರಹಳ್ಳಿ ಮಾನಸ ವಿದ್ಯಾಸಂಸ್ಥೆಯಲ್ಲಿ ಪ್ರಸ್ತುತ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೂರು ದಿನ ರಜೆ ಇದ್ದುದ್ದರಿಂದ ಕುಟುಂಬ ಸಮೇತ ಚನ್ನರಾಯಪಟ್ಟಣಕ್ಕೆ ಬಂದಿದ್ದರು. ನಿನ್ನೆ ಮಧ್ಯಾಹ್ನ ಸ್ನೇಹಿತರೊಂದಿಗೆ ಕಾಲುವೆಯಲ್ಲಿ ಸ್ನಾನ ಮಾಡಲು ಹೋದಾಗ ಈ ದುರ್ಘಟನೆ ಸಂಭವಿಸಿದೆ.

ಇನ್ನು ಈ ಸಂಬಂಧ ಕೆಆರ್ ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ABOUT THE AUTHOR

...view details