ಕರ್ನಾಟಕ

karnataka

ಅಪರಿಚಿತ ವಾಹನ ಡಿಕ್ಕಿ: ಚಿರತೆ ಸಾವು

By

Published : Mar 19, 2021, 6:58 AM IST

ರಸ್ತೆ ದಾಟುತ್ತಿದ್ದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಶಾಂತಿಗ್ರಾಮ ಬಳಿ ನಡೆದಿದೆ.

ಚಿರತೆ ಸಾವು
ಚಿರತೆ ಸಾವು

ಹಾಸನ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಚಿರತೆಯೊಂದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಶಾಂತಿಗ್ರಾಮ ಬಳಿ ನಡೆದಿದೆ.

ಹಾಸನ ತಾಲೂಕಿನ ಶಾಂತಿಗ್ರಾಮ ಸಮೀಪದ ರಾಷ್ಟ್ರೀಯ ಹೆದ್ದಾರಿ 75ರ ಮಡೆನೂರು ಗ್ರಾಮದ ಗೇಟ್ ಬಳಿ 8 ವರ್ಷದ ಹೆಣ್ಣು ಚಿರತೆ ಮೃತಪಟ್ಟಿದೆ. ಆಹಾರ ಹುಡುಕಿಕೊಂಡು ಗುಡ್ಡ ಪ್ರದೇಶದಿಂದ ರಸ್ತೆದಾಟಲು ಹೋಗುತ್ತಿದ್ದಾಗ ಅತಿವೇಗವಾಗಿ ಬಂದ ಅಪರಿಚಿತ ವಾಹನ ಚಿರತೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಚಿರತೆ ಸ್ಥಳದಲ್ಲೇ ಸಾವಿಗೀಡಾಗಿದ್ದು ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಶಾಂತಿಗ್ರಾಮ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಚಿರತೆಯ ಕಳೆ ಬರಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು, ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಶಾಂತಿಗ್ರಾಮ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details